Featured

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ

ಮುಂಬೈ: 48 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳೆಯೊಬ್ಬರು ತನ್ನ ಗಂಡ ಮತ್ತು ಅತ್ತೆ-ಮಾವನ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಥಾಣೆಯ  ಅಂಬರನಾಥ್‌ನಲ್ಲಿ ನಡೆದಿದೆ.

ವಿಶಾಲ್ ತಿಲ್ಕರ್ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಏಪ್ರಿಲ್ 30ರಂದು ವೈದ್ಯನಾಗಿದ್ದ ನಿತಿನ್ ತಿಲ್ಕರ್ ಎಂಬುವವರೊಂದಿಗೆ ಮದುವೆಯಾಗಿದ್ದರು.

ಮದುವೆಯ ಸಮಯದಲ್ಲಿ ಮಹಿಳೆ ಕುಟುಂಬದಿಂದ ತಾವು ನಿರೀಕ್ಷಿಸಿದಷ್ಟು ವರದಕ್ಷಿಣೆ ಸಿಗಲಿಲ್ಲವೆಂದು ಗಂಡನ ಮನೆಯವರು ಕೋಪಗೊಂಡಿದ್ದರು. ಅಷ್ಟೇ ಅಲ್ಲದೇ, ವಿಶಾಖಾ ಅವರಿಗೆ ತವರು ಮನೆಯಿಂದ ಚಿನ್ನ ಮತ್ತು ಹಣ ತೆಗೆದುಕೊಂಡು ಬರುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ಕೊಡುತ್ತಿದ್ದರು.

ಈ ಮಧ್ಯೆ ವಿಶಾಖಾ ನಡೆ ಬಗ್ಗೆ ಅನುಮಾನಗೊಂಡಿದ್ದ ತಿಲ್ಕರ್ ತನ್ನ ಹೆಂಡ್ತಿ ಏನ್ ಮಾಡ್ತಾಳೆ? ಯಾರೊಂದಿಗಾದರೂ ಮಾತನಾಡುತ್ತಿದ್ದಾಳಾ? ಎಂದು ನಿಗಾ ಇಡೋಕೆ ಮನೆ ಒಳಗೂ, ಹೊರಗೂ ಸಿಸಿಟಿವಿ ಅಳವಡಿಸಿದ್ದ. ಒಂದು ವೇಳೆ ವಿಶಾಖಾ ಯಾರೊಂದಿಗಾದರೂ ಮಾತನಾಡಿದರೆ ಮನೆಗೆ ಬಂದು ಮನಬಂದಂತೆ ಹೊಡೆಯುತ್ತಿದ್ದ. ಆತ್ಮಹತ್ಯೆಗೆ ಶರಣಾಗುವ ಎರಡು ದಿನಗಳ ಮುನ್ನ ಮನೆಯ ಹತ್ತಿರದ ಮಹಿಳೆಯೊಬ್ಬರ ಜೊತೆ ಮಾತನಾಡಿದ್ದಕ್ಕಾಗಿ ವಿಶಾಖಾ ಅವರ ಮೇಲೆ ಆಕೆಯ ಪತಿ ದೈಹಿಕವಾಗಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ.

ಈ ಹಿಂಸೆಯನ್ನು ತಾಳಲಾರದೇ ವಿಶಾಖಾ ಅವರು ತಮ್ಮ ತಾಯಿಗೆ ಕರೆ ಮಾಡಿ ಎಲ್ಲಾ ವಿಷಯವನ್ನು ಹೇಳಿಕೊಂಡಿದ್ದರು. ಮಗಳ ಕಷ್ಟ ಕೇಳಿ ಆಘಾತಕ್ಕೊಳಗಾಗಿದ್ದ ಪೋಷಕರು ಆಕೆಯನ್ನು ಮರಳಿ ಮನೆಗೆ ಕರೆತರಲು ಚಿಂತನೆ ನಡೆಸಿದ್ದರು. ಈ ನಡುವೆ ವಿಶಾಖಾ ನೇಣಿಗೆ ಶರಣಾಗಿದ್ದಾರೆ. ಹೆತ್ತ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಅಂಬರನಾಥ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ವಿಶಾಖಾ ಅವರ ಪತಿ ನಿತಿನ್ ತಿಲ್ಕರ್, ಅತ್ತೆ ಛಾಯಾ ಮತ್ತು ಮೈದುನ ನಿನಾದ್ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಈಗಾಗಲೇ ಪತಿ ನಿತಿನ್‌ನನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಇಬ್ಬರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago