Featured

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ

ಮುಂಬೈ: 48 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳೆಯೊಬ್ಬರು ತನ್ನ ಗಂಡ ಮತ್ತು ಅತ್ತೆ-ಮಾವನ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಥಾಣೆಯ  ಅಂಬರನಾಥ್‌ನಲ್ಲಿ ನಡೆದಿದೆ.

ವಿಶಾಲ್ ತಿಲ್ಕರ್ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಏಪ್ರಿಲ್ 30ರಂದು ವೈದ್ಯನಾಗಿದ್ದ ನಿತಿನ್ ತಿಲ್ಕರ್ ಎಂಬುವವರೊಂದಿಗೆ ಮದುವೆಯಾಗಿದ್ದರು.

ಮದುವೆಯ ಸಮಯದಲ್ಲಿ ಮಹಿಳೆ ಕುಟುಂಬದಿಂದ ತಾವು ನಿರೀಕ್ಷಿಸಿದಷ್ಟು ವರದಕ್ಷಿಣೆ ಸಿಗಲಿಲ್ಲವೆಂದು ಗಂಡನ ಮನೆಯವರು ಕೋಪಗೊಂಡಿದ್ದರು. ಅಷ್ಟೇ ಅಲ್ಲದೇ, ವಿಶಾಖಾ ಅವರಿಗೆ ತವರು ಮನೆಯಿಂದ ಚಿನ್ನ ಮತ್ತು ಹಣ ತೆಗೆದುಕೊಂಡು ಬರುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ಕೊಡುತ್ತಿದ್ದರು.

ಈ ಮಧ್ಯೆ ವಿಶಾಖಾ ನಡೆ ಬಗ್ಗೆ ಅನುಮಾನಗೊಂಡಿದ್ದ ತಿಲ್ಕರ್ ತನ್ನ ಹೆಂಡ್ತಿ ಏನ್ ಮಾಡ್ತಾಳೆ? ಯಾರೊಂದಿಗಾದರೂ ಮಾತನಾಡುತ್ತಿದ್ದಾಳಾ? ಎಂದು ನಿಗಾ ಇಡೋಕೆ ಮನೆ ಒಳಗೂ, ಹೊರಗೂ ಸಿಸಿಟಿವಿ ಅಳವಡಿಸಿದ್ದ. ಒಂದು ವೇಳೆ ವಿಶಾಖಾ ಯಾರೊಂದಿಗಾದರೂ ಮಾತನಾಡಿದರೆ ಮನೆಗೆ ಬಂದು ಮನಬಂದಂತೆ ಹೊಡೆಯುತ್ತಿದ್ದ. ಆತ್ಮಹತ್ಯೆಗೆ ಶರಣಾಗುವ ಎರಡು ದಿನಗಳ ಮುನ್ನ ಮನೆಯ ಹತ್ತಿರದ ಮಹಿಳೆಯೊಬ್ಬರ ಜೊತೆ ಮಾತನಾಡಿದ್ದಕ್ಕಾಗಿ ವಿಶಾಖಾ ಅವರ ಮೇಲೆ ಆಕೆಯ ಪತಿ ದೈಹಿಕವಾಗಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ.

ಈ ಹಿಂಸೆಯನ್ನು ತಾಳಲಾರದೇ ವಿಶಾಖಾ ಅವರು ತಮ್ಮ ತಾಯಿಗೆ ಕರೆ ಮಾಡಿ ಎಲ್ಲಾ ವಿಷಯವನ್ನು ಹೇಳಿಕೊಂಡಿದ್ದರು. ಮಗಳ ಕಷ್ಟ ಕೇಳಿ ಆಘಾತಕ್ಕೊಳಗಾಗಿದ್ದ ಪೋಷಕರು ಆಕೆಯನ್ನು ಮರಳಿ ಮನೆಗೆ ಕರೆತರಲು ಚಿಂತನೆ ನಡೆಸಿದ್ದರು. ಈ ನಡುವೆ ವಿಶಾಖಾ ನೇಣಿಗೆ ಶರಣಾಗಿದ್ದಾರೆ. ಹೆತ್ತ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಅಂಬರನಾಥ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ವಿಶಾಖಾ ಅವರ ಪತಿ ನಿತಿನ್ ತಿಲ್ಕರ್, ಅತ್ತೆ ಛಾಯಾ ಮತ್ತು ಮೈದುನ ನಿನಾದ್ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಈಗಾಗಲೇ ಪತಿ ನಿತಿನ್‌ನನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಇಬ್ಬರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Vishwa News 24

Recent Posts

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

18 minutes ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

2 hours ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

2 hours ago

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ – vishwanews24

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…

2 hours ago

ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ :  ಹೆಚ್‌ಡಿಕೆ ವಾಗ್ದಾಳಿ – vishwanews24

ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? :  ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…

2 hours ago

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ – vishwanews24

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…

2 hours ago