Featured

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ

ಮುಂಬೈ: 48 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳೆಯೊಬ್ಬರು ತನ್ನ ಗಂಡ ಮತ್ತು ಅತ್ತೆ-ಮಾವನ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಥಾಣೆಯ  ಅಂಬರನಾಥ್‌ನಲ್ಲಿ ನಡೆದಿದೆ.

ವಿಶಾಲ್ ತಿಲ್ಕರ್ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಏಪ್ರಿಲ್ 30ರಂದು ವೈದ್ಯನಾಗಿದ್ದ ನಿತಿನ್ ತಿಲ್ಕರ್ ಎಂಬುವವರೊಂದಿಗೆ ಮದುವೆಯಾಗಿದ್ದರು.

ಮದುವೆಯ ಸಮಯದಲ್ಲಿ ಮಹಿಳೆ ಕುಟುಂಬದಿಂದ ತಾವು ನಿರೀಕ್ಷಿಸಿದಷ್ಟು ವರದಕ್ಷಿಣೆ ಸಿಗಲಿಲ್ಲವೆಂದು ಗಂಡನ ಮನೆಯವರು ಕೋಪಗೊಂಡಿದ್ದರು. ಅಷ್ಟೇ ಅಲ್ಲದೇ, ವಿಶಾಖಾ ಅವರಿಗೆ ತವರು ಮನೆಯಿಂದ ಚಿನ್ನ ಮತ್ತು ಹಣ ತೆಗೆದುಕೊಂಡು ಬರುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ಕೊಡುತ್ತಿದ್ದರು.

ಈ ಮಧ್ಯೆ ವಿಶಾಖಾ ನಡೆ ಬಗ್ಗೆ ಅನುಮಾನಗೊಂಡಿದ್ದ ತಿಲ್ಕರ್ ತನ್ನ ಹೆಂಡ್ತಿ ಏನ್ ಮಾಡ್ತಾಳೆ? ಯಾರೊಂದಿಗಾದರೂ ಮಾತನಾಡುತ್ತಿದ್ದಾಳಾ? ಎಂದು ನಿಗಾ ಇಡೋಕೆ ಮನೆ ಒಳಗೂ, ಹೊರಗೂ ಸಿಸಿಟಿವಿ ಅಳವಡಿಸಿದ್ದ. ಒಂದು ವೇಳೆ ವಿಶಾಖಾ ಯಾರೊಂದಿಗಾದರೂ ಮಾತನಾಡಿದರೆ ಮನೆಗೆ ಬಂದು ಮನಬಂದಂತೆ ಹೊಡೆಯುತ್ತಿದ್ದ. ಆತ್ಮಹತ್ಯೆಗೆ ಶರಣಾಗುವ ಎರಡು ದಿನಗಳ ಮುನ್ನ ಮನೆಯ ಹತ್ತಿರದ ಮಹಿಳೆಯೊಬ್ಬರ ಜೊತೆ ಮಾತನಾಡಿದ್ದಕ್ಕಾಗಿ ವಿಶಾಖಾ ಅವರ ಮೇಲೆ ಆಕೆಯ ಪತಿ ದೈಹಿಕವಾಗಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ.

ಈ ಹಿಂಸೆಯನ್ನು ತಾಳಲಾರದೇ ವಿಶಾಖಾ ಅವರು ತಮ್ಮ ತಾಯಿಗೆ ಕರೆ ಮಾಡಿ ಎಲ್ಲಾ ವಿಷಯವನ್ನು ಹೇಳಿಕೊಂಡಿದ್ದರು. ಮಗಳ ಕಷ್ಟ ಕೇಳಿ ಆಘಾತಕ್ಕೊಳಗಾಗಿದ್ದ ಪೋಷಕರು ಆಕೆಯನ್ನು ಮರಳಿ ಮನೆಗೆ ಕರೆತರಲು ಚಿಂತನೆ ನಡೆಸಿದ್ದರು. ಈ ನಡುವೆ ವಿಶಾಖಾ ನೇಣಿಗೆ ಶರಣಾಗಿದ್ದಾರೆ. ಹೆತ್ತ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಅಂಬರನಾಥ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ವಿಶಾಖಾ ಅವರ ಪತಿ ನಿತಿನ್ ತಿಲ್ಕರ್, ಅತ್ತೆ ಛಾಯಾ ಮತ್ತು ಮೈದುನ ನಿನಾದ್ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಈಗಾಗಲೇ ಪತಿ ನಿತಿನ್‌ನನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಇಬ್ಬರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Vishwa News 24

Recent Posts

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

23 minutes ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

54 minutes ago

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…

1 hour ago

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

2 hours ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

2 hours ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

3 hours ago