ಮುಂಬೈ : ಸಚಿವ ಡಿಕೆ ಶಿವಕುಮಾರ್ ಅವರು ಮುಂಬೈನ ರಿನೈಸೆನ್ಸ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಬಂಡಾಯ ಶಾಸಕರನ್ನು ಭೇಟಿ ಮಾಡಲು ತೆರಳಿದರು. ಆದರೇ ಸಚಿವ ಡಿಕೆ ಶಿವಕುಮಾರ್ ಅವರಿಗೆ ಹೋಟೆಲ್ ಒಳಗೆ ಪ್ರವೇಶಿಸಲು ಮುಂಬೈ ಪೊಲೀಸರು ನಿರ್ಬಂಧಿಸಿದ್ದಾರೆ.
ಮುಂಬಯಿಯ ರಿನೈಸೆನ್ಸ್ ಹೋಟೆಲ್ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮನವೊಲಿಸಲು ಶಿವಕುಮಾರ್ ಮುಂಬೈಗೆ ತೆರಳಿದ್ದರು. ಆದರೆ ಅಲ್ಲಿನ ಪೊಲೀಸರು ಯಾರ ಹೆಸರಿನಲ್ಲಿ ರೂಂ ಬುಕ್ ಮಾಡಿದ್ದರೇ ಅವರಿಗೆ ಮಾತ್ರ ಒಳಪ್ರವೇಶಿಸಲು ಅನುಮತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ನಿರ್ಬಂಧದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪೊಲೀಸರು ಅವರ ಕರ್ತವ್ಯವನ್ನು ಅವರು ಮಾಡುತ್ತಿದ್ದಾರೆ. ನಾನು ನನ್ನ ಸ್ನೇಹಿತರನ್ನು ಭೇಟಿ ಮಾಡಲು ಬಂದಿದ್ದೇನೆ. ಮಹಾರಾಷ್ಟ್ರಾ ಸಿಎಂ ಕೂಡ ನನಗೆ ಒಳ್ಳೆಯ ಸ್ನೇಹಿತರು. ಒಳಗೆ ಇರುವವರು ಕೂಡ ನನ್ನ ಸ್ನೇಹಿತರು. ಹೀಗಾಗಿ ಒಳಗೆ ಹೋಗಲು ತೆರಳಿದರೇ ಬಿಡುತ್ತಿಲ್ಲ ಎಂದು ಕಿಡಿಕಾರಿದರು.
ನಾನು ನನ್ನ ಪವರ್ ಏನು ಎಂದು ತೇರಿಸಿದರೇ, ಹತ್ತೇ ಹತ್ತು ನಿಮಿಷದಲ್ಲಿ ಹೋಟೆಲ್ ಒಳಗೆ ಇರುವವರನ್ನು ಹೊರೆಗೆ ಕರೆತರಬರ ಬಲ್ಲೇ, ಆದರೇ ನಾನು ಹಾಗೆ ಮಾಡುವುದಿಲ್ಲ. ಹೋಟೆಲ್ ಒಳಗಿರುವವರೇ ತಮ್ಮ ಬಳಿ ಹೊರಗೆ ಬಂದು ಮಾತನಾಡುವವರೆ ಇಲ್ಲೇ ಇದ್ದು ಮಾತನಾಡಿಯೇ ಮರಳಿ ಹೋಗುವುದಾಗಿ ತಿಳಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…