ಮುಂಬೈ : ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಘಾಟ್ಕೋಪರ್ನಲ್ಲಿ ಸೋಮವಾರ ನಡೆದಿದೆ. ಈ ಅವಘಡದಲ್ಲಿ 74 ಮಂದಿ ಗಾಯಗೊಂಡಿದ್ದಾರೆ.
ಪೆಟ್ರೋಲ್ ಪಂಪ್ ಎದುರು ಬೃಹತ್ ಜಾಹೀರಾತು ಫಲಕವನ್ನು ನಿಲ್ಲಿಸಲಾಗಿತ್ತು. ಬಿರುಗಾಳಿ ಸಹಿತ ಮಳೆಯಿಂದಾಗಿ ಈ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿದೆ. ಕಬ್ಬಿಣದ ಬಿಲ್ ಬೋರ್ಡ್ ಪೆಟ್ರೋಲ್ ಪಂಪ್ ಸಮೀಪ ನಿಂತಿದ್ದ ಕಾರುಗಳ ಮೇಲೆ ಬಿದ್ದಿದೆ. ಪರಿಣಾಮ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳಲ್ಲಿ 35 ಮಂದಿ ಬಿಡುಗಡೆಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪರಿಹಾರ ಕಾರ್ಯಾಚರಣೆ ಇಂದು ಬೆಳಿಗ್ಗೆಯೂ ಮುಂದುವರೆದಿತ್ತು ಎಂದು ತಿಳಿದುಬಂದಿದೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಾವನ್ನಪ್ಪಿದವರ ಕುಟುಂಬದ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಮುಂಬೈನಲ್ಲಿರುವ ಎಲ್ಲಾ ಹೋಡಿರ್ಂಗ್ಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…