ಮುಂಬೈ : ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಘಾಟ್ಕೋಪರ್ನಲ್ಲಿ ಸೋಮವಾರ ನಡೆದಿದೆ. ಈ ಅವಘಡದಲ್ಲಿ 74 ಮಂದಿ ಗಾಯಗೊಂಡಿದ್ದಾರೆ.
ಪೆಟ್ರೋಲ್ ಪಂಪ್ ಎದುರು ಬೃಹತ್ ಜಾಹೀರಾತು ಫಲಕವನ್ನು ನಿಲ್ಲಿಸಲಾಗಿತ್ತು. ಬಿರುಗಾಳಿ ಸಹಿತ ಮಳೆಯಿಂದಾಗಿ ಈ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿದೆ. ಕಬ್ಬಿಣದ ಬಿಲ್ ಬೋರ್ಡ್ ಪೆಟ್ರೋಲ್ ಪಂಪ್ ಸಮೀಪ ನಿಂತಿದ್ದ ಕಾರುಗಳ ಮೇಲೆ ಬಿದ್ದಿದೆ. ಪರಿಣಾಮ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳಲ್ಲಿ 35 ಮಂದಿ ಬಿಡುಗಡೆಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪರಿಹಾರ ಕಾರ್ಯಾಚರಣೆ ಇಂದು ಬೆಳಿಗ್ಗೆಯೂ ಮುಂದುವರೆದಿತ್ತು ಎಂದು ತಿಳಿದುಬಂದಿದೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಾವನ್ನಪ್ಪಿದವರ ಕುಟುಂಬದ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಮುಂಬೈನಲ್ಲಿರುವ ಎಲ್ಲಾ ಹೋಡಿರ್ಂಗ್ಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…