ಮುಂಬೈ: ಘಾಟ್ಕೋಪರ್ನಲ್ಲಿ ಬಿಲ್ ಬೋರ್ಡ್ ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಎಂಬವರನ್ನು ರಾಜಸ್ಥಾನದ ಉದಯಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಮಾಲೀಕ ಭಿಂಡೆ ಅವರನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಬಂಧಿಸಿದೆ. ಆರೋಪಿಯ ಬಂಧನಕ್ಕೆ ಮುಂಬೈ ಪೊಲೀಸರಿಂದ ಒಟ್ಟು ಎಂಟು ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿತ್ತು. ಆರೋಪಿ ಪದೇ ಪದೇ ಸ್ಥಳ ಬದಲಿಸುತ್ತಿದ್ದ. ಅಲ್ಲದೇ ಹೆಸರು ಬದಲಿಸಿಕೊಂಡು ಉದಯಪುರದ ಹೋಟೆಲ್ ಒಂದರಲ್ಲಿ ತಂಗಿದ್ದ. ಇದೀಗ ಆರೋಪಿಯ ಬಂಧನವಾಗಿದ್ದು, ಇಂದು (ಶುಕ್ರವಾರ) ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಹೀರಾತು ಫಲಕ ಅಳವಡಿಕೆ ಕಂಪನಿ, ಫಲಕ ಅಳವಡಿಸುವಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಕಂಪನಿಗೆ 40*40 ಅಡಿಗಳ ಫಲಕ ಅಳವಡಿಸಲು ಮಾತ್ರ ಪರವಾನಿಗೆ ಇತ್ತು. ದುರ್ಘಟನೆಗೆ ಕಾರಣವಾದ ಜಾಹೀರಾತು ಫಲಕ 120*120 ಅಡಿ ಇತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ.
ಮೇ 12ರ ಸಂಜೆ ಘಾಟ್ಕೋಪರ್ನಲ್ಲಿ ಗಾಳಿ ಮಳೆಗೆ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿತ್ತು. ಇದರ ಪರಿಣಾಮ ಮಳೆಯಿಂದಾಗಿ ಪೆಟ್ರೋಲ್ ಬಂಕ್ನಲ್ಲಿ ನಿಂತುಕೊಂಡಿದ್ದ 16 ಮಂದಿ ಸಾವಿಗೀಡಾಗಿದ್ದರು. ಘಟನೆಯಲ್ಲಿ 75 ಮಂದಿ ಗಾಯಗೊಂಡಿದ್ದರು.
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…