Featured

ಮುಂಬೈ ಹೋರ್ಡಿಂಗ್ ದುರಂತ : ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್ – Vishwanews24

ಮುಂಬೈ ಹೋರ್ಡಿಂಗ್ ದುರಂತ : ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್

ಮುಂಬೈ: ಘಾಟ್‍ಕೋಪರ್‌ನಲ್ಲಿ  ಬಿಲ್ ಬೋರ್ಡ್  ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ  ಎಂಬವರನ್ನು ರಾಜಸ್ಥಾನದ ಉದಯಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‍ನ ಮಾಲೀಕ ಭಿಂಡೆ ಅವರನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್  ಬಂಧಿಸಿದೆ. ಆರೋಪಿಯ ಬಂಧನಕ್ಕೆ ಮುಂಬೈ ಪೊಲೀಸರಿಂದ ಒಟ್ಟು ಎಂಟು ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿತ್ತು. ಆರೋಪಿ ಪದೇ ಪದೇ ಸ್ಥಳ ಬದಲಿಸುತ್ತಿದ್ದ. ಅಲ್ಲದೇ ಹೆಸರು ಬದಲಿಸಿಕೊಂಡು ಉದಯಪುರದ ಹೋಟೆಲ್ ಒಂದರಲ್ಲಿ ತಂಗಿದ್ದ. ಇದೀಗ ಆರೋಪಿಯ ಬಂಧನವಾಗಿದ್ದು, ಇಂದು (ಶುಕ್ರವಾರ) ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು ಫಲಕ ಅಳವಡಿಕೆ ಕಂಪನಿ, ಫಲಕ ಅಳವಡಿಸುವಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಕಂಪನಿಗೆ 40*40 ಅಡಿಗಳ ಫಲಕ ಅಳವಡಿಸಲು ಮಾತ್ರ ಪರವಾನಿಗೆ ಇತ್ತು. ದುರ್ಘಟನೆಗೆ ಕಾರಣವಾದ ಜಾಹೀರಾತು ಫಲಕ 120*120 ಅಡಿ ಇತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ.

ಮೇ 12ರ ಸಂಜೆ ಘಾಟ್‍ಕೋಪರ್‌ನಲ್ಲಿ ಗಾಳಿ ಮಳೆಗೆ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿತ್ತು. ಇದರ ಪರಿಣಾಮ ಮಳೆಯಿಂದಾಗಿ ಪೆಟ್ರೋಲ್ ಬಂಕ್‍ನಲ್ಲಿ ನಿಂತುಕೊಂಡಿದ್ದ 16 ಮಂದಿ ಸಾವಿಗೀಡಾಗಿದ್ದರು. ಘಟನೆಯಲ್ಲಿ 75 ಮಂದಿ ಗಾಯಗೊಂಡಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago