ಮುಂಬೈ: ಕಳೆದ ವಾರ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಮಿಲಿಂದ್ ದೇವರಾ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದ ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮುಕೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿ ಅವರು ಶುಕ್ರವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಹಿರಂಗ ಸಭೆಯಲ್ಲಿ ಮುಂದಿನ ಸಾಲಿನಲ್ಲಿ ಆಸೀನರಾಗಿದ್ದು ಹಲವರು ಹುಬ್ಬೇರಿಸುವಂತೆ ಮಾಡಿತ್ತು.
ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪ್ರೇಕ್ಷಕರ ಗ್ಯಾಲರಿಯ ಮೊದಲ ಸಾಲಿನಲ್ಲಿ ಅನಂತ್ ಕುಳಿತಿದ್ದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದೇಶವನ್ನು ಬೆಂಬಲಿಸಲು ಮತ್ತು ಪ್ರಧಾನಿ ಮೋದಿ ಅವರ ಭಾಷಣ ಕೇಳಲು ಆಗಮಿಸಿದ್ದೇನೆ ಎಂದು ಹೇಳಿದ್ದಾರೆ.
ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತನ್ನ ಕಿರಿಯ ಸೋದರ ಅನಿಲ ಅಂಬಾನಿ ವಿರುದ್ಧ ಎಡೆಬಿಡದೆ ದಾಳಿ ನಡೆಸುತ್ತಿದ್ದರೂ ಮುಕೇಶ ಆ ಪಕ್ಷದ ಅಭ್ಯರ್ಥಿ ದೇವರಾಗೆ ಬೆಂಬಲ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದರು.ಇದೀಗ ಅವರ ಪುತ್ರ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಇನ್ನೊಂದು ಅಚ್ಚರಿಯನ್ನು ಮೂಡಿಸಿದ್ದಾರೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…