ಮುಂಬೈ: ಕಳೆದ ವಾರ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಮಿಲಿಂದ್ ದೇವರಾ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದ ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮುಕೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿ ಅವರು ಶುಕ್ರವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಹಿರಂಗ ಸಭೆಯಲ್ಲಿ ಮುಂದಿನ ಸಾಲಿನಲ್ಲಿ ಆಸೀನರಾಗಿದ್ದು ಹಲವರು ಹುಬ್ಬೇರಿಸುವಂತೆ ಮಾಡಿತ್ತು.
ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪ್ರೇಕ್ಷಕರ ಗ್ಯಾಲರಿಯ ಮೊದಲ ಸಾಲಿನಲ್ಲಿ ಅನಂತ್ ಕುಳಿತಿದ್ದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದೇಶವನ್ನು ಬೆಂಬಲಿಸಲು ಮತ್ತು ಪ್ರಧಾನಿ ಮೋದಿ ಅವರ ಭಾಷಣ ಕೇಳಲು ಆಗಮಿಸಿದ್ದೇನೆ ಎಂದು ಹೇಳಿದ್ದಾರೆ.
ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತನ್ನ ಕಿರಿಯ ಸೋದರ ಅನಿಲ ಅಂಬಾನಿ ವಿರುದ್ಧ ಎಡೆಬಿಡದೆ ದಾಳಿ ನಡೆಸುತ್ತಿದ್ದರೂ ಮುಕೇಶ ಆ ಪಕ್ಷದ ಅಭ್ಯರ್ಥಿ ದೇವರಾಗೆ ಬೆಂಬಲ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದರು.ಇದೀಗ ಅವರ ಪುತ್ರ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಇನ್ನೊಂದು ಅಚ್ಚರಿಯನ್ನು ಮೂಡಿಸಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…