ಬೆಂಗಳೂರು: ‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ 50 ಶಾಸಕರ ಕನಸು ಆಗಿದ್ದು, ಇದಕ್ಕಾಗಿ ಯಾವುದೇ ತ್ಯಾಗಕ್ಕೂ ಎಲ್ಲರೂ ಸಿದ್ಧರಿದ್ದೇವೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.
ಪಟ್ಟಣದಲ್ಲಿ ಬುಧವಾರ ಹಾಲುಮತ ಸಮಾಜದವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘2019ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಶಾಸಕರ ಆಶಯದಂತೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರದ ಪತನವನ್ನೆ ಕಾಯುತ್ತಿರುವ ರಾಜಕೀಯ ವ್ಯಕ್ತಿಗಳ ಸಣ್ಣ ಮಾತು ಕೂಡ ದೊಡ್ಡ ಅಸ್ತ್ರವಾಗುತ್ತಿದೆ.ಸಮ್ಮಿಶ್ರ ಸರ್ಕಾರದಲ್ಲಿ ಹಲವು ಶಾಸಕರು ಸಚಿವ ಆಕಾಂಕ್ಷಗಳಾಗಿ ಕಾಯುತ್ತಿದ್ದು ಸಂಪುಟ ವಿಸ್ತರಣೆಯ ದಿನವನ್ನೇ ಎದುರು ನೋಡುತ್ತಿದ್ದಾರೆ.ಈ ಮಧ್ಯೆ ಡಿ.22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದ ಬೆನ್ನಲ್ಲೇ ಕಂಪ್ಲಿ ಕಾಂಗ್ರೆಸ್ ಶಾಸಕ ಗಣೇಶ್ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್ ಅವರು ನನಗೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನಿಸಿದೆ. ನಾನು ಮಾತ್ರ ಅಲ್ಲ ನಲವತ್ತರಿಂದ ಐವತ್ತು ಶಾಸಕರಿಗೆ ಈ ಅನಿಸಿಕೆ ಇದೆ ಎಂದರು.
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಸ್ಕೃತ ಪಾಠಶಾಲೆ ಅಧ್ಯಕ್ಷ ಎಸ್.ಎಸ್.ಎಂ. ಚನ್ನಯ್ಯಸ್ವಾಮಿ ಹಾಜರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…