Featured

ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಶಾಸಕರ ಕನಸು ,ಇದಕ್ಕಾಗಿ ಎಲ್ಲರೂ ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ’ : ಶಾಸಕ ಜೆ.ಎನ್‌. ಗಣೇಶ್‌

ಬೆಂಗಳೂರು: ‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಪಕ್ಷದ 50 ಶಾಸಕರ ಕನಸು ಆಗಿದ್ದು, ಇದಕ್ಕಾಗಿ ಯಾವುದೇ ತ್ಯಾಗಕ್ಕೂ ಎಲ್ಲರೂ ಸಿದ್ಧರಿದ್ದೇವೆ’ ಎಂದು ಶಾಸಕ ಜೆ.ಎನ್‌. ಗಣೇಶ್‌ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಹಾಲುಮತ ಸಮಾಜದವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘2019ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಶಾಸಕರ ಆಶಯದಂತೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರದ ಪತನವನ್ನೆ ಕಾಯುತ್ತಿರುವ ರಾಜಕೀಯ ವ್ಯಕ್ತಿಗಳ ಸಣ್ಣ ಮಾತು ಕೂಡ ದೊಡ್ಡ ಅಸ್ತ್ರವಾಗುತ್ತಿದೆ.ಸಮ್ಮಿಶ್ರ ಸರ್ಕಾರದಲ್ಲಿ ಹಲವು ಶಾಸಕರು ಸಚಿವ ಆಕಾಂಕ್ಷಗಳಾಗಿ ಕಾಯುತ್ತಿದ್ದು ಸಂಪುಟ ವಿಸ್ತರಣೆಯ ದಿನವನ್ನೇ ಎದುರು ನೋಡುತ್ತಿದ್ದಾರೆ.ಈ ಮಧ್ಯೆ ಡಿ.22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದ ಬೆನ್ನಲ್ಲೇ ಕಂಪ್ಲಿ ಕಾಂಗ್ರೆಸ್‌ ಶಾಸಕ ಗಣೇಶ್‌ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್‌ ಅವರು ನನಗೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನಿಸಿದೆ. ನಾನು ಮಾತ್ರ ಅಲ್ಲ ನಲವತ್ತರಿಂದ ಐವತ್ತು ಶಾಸಕರಿಗೆ ಈ ಅನಿಸಿಕೆ ಇದೆ ಎಂದರು.

ಡಿಸೆಂಬರ್‌ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸ್ಕೃತ ಪಾಠಶಾಲೆ ಅಧ್ಯಕ್ಷ ಎಸ್.ಎಸ್.ಎಂ. ಚನ್ನಯ್ಯಸ್ವಾಮಿ ಹಾಜರಿದ್ದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago