Featured

ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಶಾಸಕರ ಕನಸು ,ಇದಕ್ಕಾಗಿ ಎಲ್ಲರೂ ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ’ : ಶಾಸಕ ಜೆ.ಎನ್‌. ಗಣೇಶ್‌

ಬೆಂಗಳೂರು: ‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಪಕ್ಷದ 50 ಶಾಸಕರ ಕನಸು ಆಗಿದ್ದು, ಇದಕ್ಕಾಗಿ ಯಾವುದೇ ತ್ಯಾಗಕ್ಕೂ ಎಲ್ಲರೂ ಸಿದ್ಧರಿದ್ದೇವೆ’ ಎಂದು ಶಾಸಕ ಜೆ.ಎನ್‌. ಗಣೇಶ್‌ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಹಾಲುಮತ ಸಮಾಜದವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘2019ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಶಾಸಕರ ಆಶಯದಂತೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರದ ಪತನವನ್ನೆ ಕಾಯುತ್ತಿರುವ ರಾಜಕೀಯ ವ್ಯಕ್ತಿಗಳ ಸಣ್ಣ ಮಾತು ಕೂಡ ದೊಡ್ಡ ಅಸ್ತ್ರವಾಗುತ್ತಿದೆ.ಸಮ್ಮಿಶ್ರ ಸರ್ಕಾರದಲ್ಲಿ ಹಲವು ಶಾಸಕರು ಸಚಿವ ಆಕಾಂಕ್ಷಗಳಾಗಿ ಕಾಯುತ್ತಿದ್ದು ಸಂಪುಟ ವಿಸ್ತರಣೆಯ ದಿನವನ್ನೇ ಎದುರು ನೋಡುತ್ತಿದ್ದಾರೆ.ಈ ಮಧ್ಯೆ ಡಿ.22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದ ಬೆನ್ನಲ್ಲೇ ಕಂಪ್ಲಿ ಕಾಂಗ್ರೆಸ್‌ ಶಾಸಕ ಗಣೇಶ್‌ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್‌ ಅವರು ನನಗೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನಿಸಿದೆ. ನಾನು ಮಾತ್ರ ಅಲ್ಲ ನಲವತ್ತರಿಂದ ಐವತ್ತು ಶಾಸಕರಿಗೆ ಈ ಅನಿಸಿಕೆ ಇದೆ ಎಂದರು.

ಡಿಸೆಂಬರ್‌ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸ್ಕೃತ ಪಾಠಶಾಲೆ ಅಧ್ಯಕ್ಷ ಎಸ್.ಎಸ್.ಎಂ. ಚನ್ನಯ್ಯಸ್ವಾಮಿ ಹಾಜರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

12 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

12 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

12 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago