ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ 14 ತಿಂಗಳು ನಾನು ಕಾಂಗ್ರೆಸ್ ಪಕ್ಷದ ಜೀತದಾಳುವಿನಂತೆ ದುಡಿದೆ. ಆದರೂ, ಮೈತ್ರಿ ಸರ್ಕಾರ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ಡಿಕೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೊಳ್ಳುವುದು ಬಹುತೇಕ ಕಾಂಗ್ರೆಸ್ ನಾಯಕರಿಗೆ ಅದರಲ್ಲೂ ವಿಶೇಷವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಇಷ್ಟವಿರಲಿಲ್ಲ. ಇವೆಲ್ಲದರ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್ ನೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಆಸಕ್ತಿ ತೋರಿ, ಜೆಡಿಎಸ್ ಗೆ ಸಂಪೂರ್ಣ ಬೆಂಬಲ ನೀಡಿದ್ದರು ಎಂದರು.
ನಿಗಮ ಮತ್ತು ಮಂಡಳಿಗಳಿಗೆ ನೇಮಕವಾಗಿದ್ದ ಶಾಸಕರು ಸೇರಿ ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆ.ಆದರೂ, ಸರ್ಕಾರದ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ. ಸರ್ಕಾರ ಪತನವಾಗಲು ನಾನು ಕಾರಣ ಎಂದು ದೂರಲಾಗುತ್ತಿದೆ. ಅದರೆ ಇದಕ್ಕೆ ನಾನು ಕಾರಣನಲ್ಲ. ನನ್ನನ್ನು ದೂರುತ್ತಿರುವುದು ಏಕೆಂದು ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…