Featured

ಮುಖ್ಯಮಂತ್ರಿಯಿಂದ ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನ : ಲಾಲಾಜಿ ಆರ್‌. ಮೆಂಡನ್‌ -Vishwanews24

ಪಡುಬಿದ್ರಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ನೀಡಿರುತ್ತಾರೆ.  ಕ್ಷೇತ್ರದ ಶಾಸಕನಾಗಿ ವಿವಿಧ ಅನುದಾನವನ್ನು ಬಳಸಿಕೊಂಡು ಗ್ರಾಮದ ಅಭಿವೃದ್ಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಅವರು ಸೆ.24ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆದ ಬಡಾಗ್ರಾಮ ಪಂಚಾಯತ್‌ ಇದರ 2019-20ನೇ ಸಾಲಿನ ಪ್ರಥಮ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾಪು ಪುರಸಭೆಗೆ ಸೇರ್ಪಡೆೆಗೊಳಿಸುವ ಬಗ್ಗೆ ಗ್ರಾಮಸ್ಥರಿಗೆ ಮತ್ತಷ್ಟು ಅನ್ಯಾಯ ಆಗಬಾರದು. ಆ ನಿಟ್ಟಿನಲ್ಲಿ ಸಾಧಕ, ಬಾಧಕದ ಬಗ್ಗೆ ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಕರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು ನಿರ್ಣಯ ಕೈಗೊಳ್ಳಲಾಯಿತು.

ಇನ್ನುಳಿದಂತೆ ಸೂಕ್ತವಾಗಿ ತ್ಯಾಜ್ಯ ಸಂಗ್ರಹ, ಗಿಡಗಂಟಿ ಕಟಾವು, ಬೀದಿ ದೀಪ ವ್ಯವಸ್ಥೆಯನ್ನು ಸಮರ್ಪಕವಾಗಿ ಒದಗಿಸುವಂತೆ ಒತ್ತಾಯಿಸಿದ ಗ್ರಾಮಸ್ಥರು, ತುಕ್ಕು ಹಿಡಿದ ವಿದ್ಯುತ್‌ ತಂತಿ, ನೇತುಬೀಳುವ ವಿದ್ಯುತ್‌ ತಂತಿ ಬದಲಾಯಿಸುವಂತೆ ಮೆಸ್ಕಾಂ ಅಧಿಕಾರಿಗೆ ಆಗ್ರಹಿಸಿದ್ದು, ಕೇವಲ ಪುಸ್ತಕದಲ್ಲಿ ಬರೆದದ್ದನ್ನು ಕಾರ್ಯ ರೂಪಕ್ಕೆ ತರುವಂತೆ ಆಗ್ರಹಿಸಿದರು.

ನಗರಾಭಿವೃದ್ಧಿ ಅಧಿಕಾರಿ ಒಂದು ದಿನವಾದರೂ ಸಂಪೂರ್ಣವಾಗಿ ಸಮರ್ಪಕವಾಗಿ ಕರ್ತವ್ಯ ನಿಭಾಯಿಸುವಂತೆ ವ್ಯವಸ್ಥೆ ಕಲ್ಪಿಸಲು ಶಾಸಕರಲ್ಲಿ ಕೋರಿಕೊಂಡರು. ಎರ್ಮಾಳುನಲ್ಲಿ ತಡೆರಹಿತ ಬಸ್ಸು ನಿಲುಗಡೆಯನ್ನು ಕಡ್ಡಾಯಗೊಳಿಸುವಂತೆ ಬಂದ ಅರ್ಜಿಯನ್ನು ಸಭೆಗೆ ತಿಳಿಸಲಾಯಿತು. ಬಡಾ ಎರ್ಮಾಳಿನಲ್ಲಿ ಕೆಪಿಎಸ್‌ ಶಾಲೆ ಆರಂಭಿಸಲು ಒತ್ತಾಯ ಕೇಳಿ ಬಂದಿತ್ತು.

ಸಿಬಂದಿ ಚಂದ್ರಾವತೀ ವಿ.ಆಚಾರ್ಯ ವರದಿ ವಾಚಿಸಿದರು. ಕಾರ್ಯದರ್ಶಿ ಪೂರ್ಣಿಮಾ ಎಂ.ಬಂಗೇರ ವಂದಿಸಿದರು. ಸಿಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago