ಪಡುಬಿದ್ರಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ನೀಡಿರುತ್ತಾರೆ. ಕ್ಷೇತ್ರದ ಶಾಸಕನಾಗಿ ವಿವಿಧ ಅನುದಾನವನ್ನು ಬಳಸಿಕೊಂಡು ಗ್ರಾಮದ ಅಭಿವೃದ್ಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಅವರು ಸೆ.24ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆದ ಬಡಾಗ್ರಾಮ ಪಂಚಾಯತ್ ಇದರ 2019-20ನೇ ಸಾಲಿನ ಪ್ರಥಮ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಪು ಪುರಸಭೆಗೆ ಸೇರ್ಪಡೆೆಗೊಳಿಸುವ ಬಗ್ಗೆ ಗ್ರಾಮಸ್ಥರಿಗೆ ಮತ್ತಷ್ಟು ಅನ್ಯಾಯ ಆಗಬಾರದು. ಆ ನಿಟ್ಟಿನಲ್ಲಿ ಸಾಧಕ, ಬಾಧಕದ ಬಗ್ಗೆ ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಕರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು ನಿರ್ಣಯ ಕೈಗೊಳ್ಳಲಾಯಿತು.
ನಗರಾಭಿವೃದ್ಧಿ ಅಧಿಕಾರಿ ಒಂದು ದಿನವಾದರೂ ಸಂಪೂರ್ಣವಾಗಿ ಸಮರ್ಪಕವಾಗಿ ಕರ್ತವ್ಯ ನಿಭಾಯಿಸುವಂತೆ ವ್ಯವಸ್ಥೆ ಕಲ್ಪಿಸಲು ಶಾಸಕರಲ್ಲಿ ಕೋರಿಕೊಂಡರು. ಎರ್ಮಾಳುನಲ್ಲಿ ತಡೆರಹಿತ ಬಸ್ಸು ನಿಲುಗಡೆಯನ್ನು ಕಡ್ಡಾಯಗೊಳಿಸುವಂತೆ ಬಂದ ಅರ್ಜಿಯನ್ನು ಸಭೆಗೆ ತಿಳಿಸಲಾಯಿತು. ಬಡಾ ಎರ್ಮಾಳಿನಲ್ಲಿ ಕೆಪಿಎಸ್ ಶಾಲೆ ಆರಂಭಿಸಲು ಒತ್ತಾಯ ಕೇಳಿ ಬಂದಿತ್ತು.
ಸಿಬಂದಿ ಚಂದ್ರಾವತೀ ವಿ.ಆಚಾರ್ಯ ವರದಿ ವಾಚಿಸಿದರು. ಕಾರ್ಯದರ್ಶಿ ಪೂರ್ಣಿಮಾ ಎಂ.ಬಂಗೇರ ವಂದಿಸಿದರು. ಸಿಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…