ಪಡುಬಿದ್ರಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ನೀಡಿರುತ್ತಾರೆ. ಕ್ಷೇತ್ರದ ಶಾಸಕನಾಗಿ ವಿವಿಧ ಅನುದಾನವನ್ನು ಬಳಸಿಕೊಂಡು ಗ್ರಾಮದ ಅಭಿವೃದ್ಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಅವರು ಸೆ.24ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆದ ಬಡಾಗ್ರಾಮ ಪಂಚಾಯತ್ ಇದರ 2019-20ನೇ ಸಾಲಿನ ಪ್ರಥಮ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಪು ಪುರಸಭೆಗೆ ಸೇರ್ಪಡೆೆಗೊಳಿಸುವ ಬಗ್ಗೆ ಗ್ರಾಮಸ್ಥರಿಗೆ ಮತ್ತಷ್ಟು ಅನ್ಯಾಯ ಆಗಬಾರದು. ಆ ನಿಟ್ಟಿನಲ್ಲಿ ಸಾಧಕ, ಬಾಧಕದ ಬಗ್ಗೆ ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಕರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು ನಿರ್ಣಯ ಕೈಗೊಳ್ಳಲಾಯಿತು.
ನಗರಾಭಿವೃದ್ಧಿ ಅಧಿಕಾರಿ ಒಂದು ದಿನವಾದರೂ ಸಂಪೂರ್ಣವಾಗಿ ಸಮರ್ಪಕವಾಗಿ ಕರ್ತವ್ಯ ನಿಭಾಯಿಸುವಂತೆ ವ್ಯವಸ್ಥೆ ಕಲ್ಪಿಸಲು ಶಾಸಕರಲ್ಲಿ ಕೋರಿಕೊಂಡರು. ಎರ್ಮಾಳುನಲ್ಲಿ ತಡೆರಹಿತ ಬಸ್ಸು ನಿಲುಗಡೆಯನ್ನು ಕಡ್ಡಾಯಗೊಳಿಸುವಂತೆ ಬಂದ ಅರ್ಜಿಯನ್ನು ಸಭೆಗೆ ತಿಳಿಸಲಾಯಿತು. ಬಡಾ ಎರ್ಮಾಳಿನಲ್ಲಿ ಕೆಪಿಎಸ್ ಶಾಲೆ ಆರಂಭಿಸಲು ಒತ್ತಾಯ ಕೇಳಿ ಬಂದಿತ್ತು.
ಸಿಬಂದಿ ಚಂದ್ರಾವತೀ ವಿ.ಆಚಾರ್ಯ ವರದಿ ವಾಚಿಸಿದರು. ಕಾರ್ಯದರ್ಶಿ ಪೂರ್ಣಿಮಾ ಎಂ.ಬಂಗೇರ ವಂದಿಸಿದರು. ಸಿಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…