Featured

ಮುಖ್ಯಮಂತ್ರಿಯಿಂದ ಕೆ.ಎಸ್.ಎಫ್.ಸಿ. ಕಿರುಹೊತ್ತಿಗೆ ಬಿಡುಗಡೆ -Vishwanews24

ಮುಖ್ಯಮಂತ್ರಿಯಿಂದ ಕೆ.ಎಸ್.ಎಫ್.ಸಿ. ಕಿರುಹೊತ್ತಿಗೆ ಬಿಡುಗಡೆ -Vishwanews24

ಉಡುಪಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ.ಎಸ್.ಎಫ್.ಸಿ) ಯು ದೇಶದಲ್ಲೇ ರಾಜ್ಯ ಹಣಕಾಸು ಸಂಸ್ಥೆಗಳಲ್ಲಿ ಮುಂಚೂಣಿ ಹಣಕಾಸು ಸಂಸ್ಥೆಯಾಗಿದೆ. ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ದೀರ್ಘಕಾಲೀನ ಮತ್ತು ಅಲ್ಪಾವಧಿಯ ಆರ್ಥಿಕ ಅಗತ್ಯಗಳನ್ನು ಪೂರೈಸಲು ೧೯೫೯ ರಲ್ಲಿ ಕೆ.ಎಸ್.ಎಫ್.ಸಿ ಯು ಅಸ್ತಿತ್ವಕ್ಕೆ ಬಂದಿದ್ದು, ಸಂಸ್ಥೆಯು ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಬದಲಾವಣೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದೆ.

ರಾಜ್ಯದ ಸುಸ್ಥಿರ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸ್ಥಾಪನೆಗೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತಿದ್ದು, ಇಂದು ೨೨೦೮ ಕೋಟಿ ರೂ. ಆಸ್ತಿ ಹೊಂದಿ, ದೇಶದ ಪ್ರಮುಖ ರಾಜ್ಯ ಹಣಕಾಸು ನಿಗಮಗಳಲ್ಲಿ ಒಂದಾಗಿದೆ.

ಕೆ.ಎಸ್.ಎಫ್.ಸಿ ಯು ತನ್ನ ಸ್ಥಾಪಿತ ಅವಧಿಯಲ್ಲಿ ೧೧ ಘಟಕಗಳಿಗೆ ೨೮ ಲಕ್ಷ ರೂ. ಸಾಲ ಮಂಜೂರು ಮಾಡಿದ್ದು, ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಶಾಖೆಗಳ ಮೂಲಕ ೧,೭೫,೦೦೦ ಕ್ಕೂ ಹೆಚ್ಚು ಘಟಕಗಳಿಗೆ ೧೮,೦೦೦ ಕೋಟಿ ರೂ. ಗೂ ಹೆಚ್ಚು ಸಂಚಿತ ಸಾಲ ಮಂಜೂರು ಮಾಡಿದೆ. ಇದರಲ್ಲಿ ಶೇ. ೫೦ ಕ್ಕಿಂತ ಹೆಚ್ಚು ಸಾಲಗಳನ್ನು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ನೀಡಿದ್ದು, ಸಂಸ್ಥೆಯು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಸಹ ಪ್ರಮುಖ ಪಾತ್ರ ವಹಿಸುತ್ತದೆ. ಸಂಸ್ಥೆಯು ೨೦೧೯-೨೦ ರ ಆರ್ಥಿಕ ವರ್ಷದಲ್ಲಿ ೪೪.೯೨ ಕೋಟಿ ರೂ. ಗಳ ನಿರ್ವಹಣಾ ಲಾಭವನ್ನೂ ಸಹ ಗಳಿಸಿರುತ್ತದೆ.

ಕೆ.ಎಸ್.ಎಫ್.ಸಿ ಯು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದು, ಸಂಸ್ಥೆಯಿAದ ಹಣಕಾಸು ನೆರವು ಪಡೆದು ಯಶಸ್ವಿಯಾದ ಕೆಲವು ಉದ್ಯಮಿಗಳ ಯಶೋಗಾಥೆಯನ್ನು ಒಳಗೊಂಡ, ಕೇಂದ್ರ ಹಾಗೂ ರಾಜ್ಯ ಸಾರ್ವಜನಿಕ ಉದ್ಯಮಗಳ ಸಹಾಯದಿಂದ Triumphant Sixty ಕಿರುಹೊತ್ತಿಗೆಯನ್ನು ಕೆ.ಎಸ್.ಎಫ್.ಸಿ ಯ ೬೦ ನೇ ವರ್ಷದ ವಜ್ರಮಹೋತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನವರಿ ೩೦ ರಂದು ವಿಧಾನ ಸೌಧದ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಎಂ ಅಶ್ವಥ ನಾರಾಯಣ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೆ.ಎಸ್.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕ ಏಕ್‌ರೂಪ್ ಕೌರ್, ಕೆ.ಎಸ್.ಎಫ್.ಸಿ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಸಿ. ಶಿವಪ್ರಕಾಶ್ ಮತ್ತು ಜಿ.ವಿ ಚಂದ್ರಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago