ಉಡುಪಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ.ಎಸ್.ಎಫ್.ಸಿ) ಯು ದೇಶದಲ್ಲೇ ರಾಜ್ಯ ಹಣಕಾಸು ಸಂಸ್ಥೆಗಳಲ್ಲಿ ಮುಂಚೂಣಿ ಹಣಕಾಸು ಸಂಸ್ಥೆಯಾಗಿದೆ. ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ದೀರ್ಘಕಾಲೀನ ಮತ್ತು ಅಲ್ಪಾವಧಿಯ ಆರ್ಥಿಕ ಅಗತ್ಯಗಳನ್ನು ಪೂರೈಸಲು ೧೯೫೯ ರಲ್ಲಿ ಕೆ.ಎಸ್.ಎಫ್.ಸಿ ಯು ಅಸ್ತಿತ್ವಕ್ಕೆ ಬಂದಿದ್ದು, ಸಂಸ್ಥೆಯು ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಬದಲಾವಣೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದೆ.
ರಾಜ್ಯದ ಸುಸ್ಥಿರ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸ್ಥಾಪನೆಗೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತಿದ್ದು, ಇಂದು ೨೨೦೮ ಕೋಟಿ ರೂ. ಆಸ್ತಿ ಹೊಂದಿ, ದೇಶದ ಪ್ರಮುಖ ರಾಜ್ಯ ಹಣಕಾಸು ನಿಗಮಗಳಲ್ಲಿ ಒಂದಾಗಿದೆ.
ಕೆ.ಎಸ್.ಎಫ್.ಸಿ ಯು ತನ್ನ ಸ್ಥಾಪಿತ ಅವಧಿಯಲ್ಲಿ ೧೧ ಘಟಕಗಳಿಗೆ ೨೮ ಲಕ್ಷ ರೂ. ಸಾಲ ಮಂಜೂರು ಮಾಡಿದ್ದು, ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಶಾಖೆಗಳ ಮೂಲಕ ೧,೭೫,೦೦೦ ಕ್ಕೂ ಹೆಚ್ಚು ಘಟಕಗಳಿಗೆ ೧೮,೦೦೦ ಕೋಟಿ ರೂ. ಗೂ ಹೆಚ್ಚು ಸಂಚಿತ ಸಾಲ ಮಂಜೂರು ಮಾಡಿದೆ. ಇದರಲ್ಲಿ ಶೇ. ೫೦ ಕ್ಕಿಂತ ಹೆಚ್ಚು ಸಾಲಗಳನ್ನು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ನೀಡಿದ್ದು, ಸಂಸ್ಥೆಯು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಸಹ ಪ್ರಮುಖ ಪಾತ್ರ ವಹಿಸುತ್ತದೆ. ಸಂಸ್ಥೆಯು ೨೦೧೯-೨೦ ರ ಆರ್ಥಿಕ ವರ್ಷದಲ್ಲಿ ೪೪.೯೨ ಕೋಟಿ ರೂ. ಗಳ ನಿರ್ವಹಣಾ ಲಾಭವನ್ನೂ ಸಹ ಗಳಿಸಿರುತ್ತದೆ.
ಕೆ.ಎಸ್.ಎಫ್.ಸಿ ಯು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದು, ಸಂಸ್ಥೆಯಿAದ ಹಣಕಾಸು ನೆರವು ಪಡೆದು ಯಶಸ್ವಿಯಾದ ಕೆಲವು ಉದ್ಯಮಿಗಳ ಯಶೋಗಾಥೆಯನ್ನು ಒಳಗೊಂಡ, ಕೇಂದ್ರ ಹಾಗೂ ರಾಜ್ಯ ಸಾರ್ವಜನಿಕ ಉದ್ಯಮಗಳ ಸಹಾಯದಿಂದ Triumphant Sixty ಕಿರುಹೊತ್ತಿಗೆಯನ್ನು ಕೆ.ಎಸ್.ಎಫ್.ಸಿ ಯ ೬೦ ನೇ ವರ್ಷದ ವಜ್ರಮಹೋತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನವರಿ ೩೦ ರಂದು ವಿಧಾನ ಸೌಧದ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಅಶ್ವಥ ನಾರಾಯಣ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೆ.ಎಸ್.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕ ಏಕ್ರೂಪ್ ಕೌರ್, ಕೆ.ಎಸ್.ಎಫ್.ಸಿ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಸಿ. ಶಿವಪ್ರಕಾಶ್ ಮತ್ತು ಜಿ.ವಿ ಚಂದ್ರಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…