Featured

ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ; ಬಿಜೆಪಿಯ ಬಣ್ಣದ ಮಾತುಗಳಿಗೆ ಮರುಳಾಗಬೇಡಿ : ಸಿದ್ಧರಾಮಯ್ಯ – vishwanews24

ಬಿಜೆಪಿ ಅವರಿಗೆ ಸುಳ್ಳು ಹೇಳುವುದು ಬಿಟ್ಟರೆ ಏನು ಬರಲ್ಲ : ಸಿಎಂ ಸಿದ್ಧರಾಮಯ್ಯ

ಬಳ್ಳಾರಿ : ನಿನ್ನೆಯಷ್ಟೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದೀಗ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಬಿಜೆಪಿ ಜೆಡಿಎಸ್ ನವರು ಮುಗಿಸುವುದಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಮುಗಿಸಿದರೇ ಕಾಂಗ್ರೆಸ್ ಮುಗಿಸಿದಂತೆ ಅಂದುಕೊಂಡಿದ್ದಾರೆ. ಆದರೆ ಆಶೀರ್ವಾದ ಇರುವವರೆಗೂ ನನ್ನನ್ನು ಮುಗಿಸುವುದಕ್ಕೆ ಆಗಲ್ಲ ಎಂದರು.

ಬಿಜೆಪಿ ನಾಯಕರು ಬಣ್ಣದ ಮಾತುಗಳಿಗೆ ನೀವು ಮರುಳಾಗಬೇಡಿ ನನ್ನ ಮತ್ತು ಶಾಸಕ ಬಿ. ನಾಗೇಂದ್ರ ವಿರುದ್ಧ ಸುಳ್ಳು ಕೇಸ್ ಹಾಕಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಟೀಕೆ ಮಾಡಿದವರನ್ನು ಮುಗಿಸಲು ಹೊರಟಿದ್ದಾರೆ.ಅನ್ನಪೂರ್ಣ ಗೆದ್ದರೆ ತುಕಾರಾಮ ಮಾಡಿದ ಕೆಲಸ ಮುಂದುವರಿಸುತ್ತಾರೆ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಅವರಿಗೆ ಸುಳ್ಳು ಹೇಳುವುದು ಬಿಟ್ಟರೆ ಏನು ಬರಲ್ಲ. 2023ರ ಚುನಾವಣೆಯಲ್ಲಿ 136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಅಧಿಕಾರಕ್ಕೆ ಬಂದ ಒಂದೇ ದಿನದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮಹಿಳೆಯರು ಶಕ್ತಿ ಯೋಜನೆಯ ಅಡಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಗೃಹಜೋತಿ ಯೋಜನೆ ಅಡಿ 1.61 ಕುಟುಂಬಕ್ಕೆ ಉಚಿತ ವಿದ್ಯುತ್ ಪೂರೈಕೆ ಆಗುತ್ತಿದೆ. ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜನಾರ್ದನ ರೆಡ್ಡಿ ಇಂತಹ ಯೋಜನೆಗಳನ್ನು ಕೊಟ್ಟಿದ್ರಾ? ಎಂದು ಪ್ರಶ್ನಿಸಿದ್ದಾರೆ.

ಆದರೂ ಕಾಂಗ್ರೆಸ್ ಪಕ್ಷವನ್ನು ಬೈದುಕೊಂಡು ತಿರುಗಾಡುತ್ತಿದ್ದಾರೆ. ಹಣ ಕೊಟ್ಟು ಮತ ಹಾಕಿಸಿಕೊಳ್ಳುತ್ತಾರೆ ಆದರೆ ಜನರ ಬಳಿ ಇದ್ದವರು ಗೆಲ್ಲಲ್ಲ. 8 ದಿನ ಜನರ ಬಳಿ ಇದ್ದವರೇ ಗೆಲ್ಲೋದು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಎಚ್ ಡಿ ಕುಮಾರಸ್ವಾಮಿಯೇ ಈ ಮಾತು ಹೇಳಿದ್ದಾರೆ. 2018 ರ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತು.

600 ಭರವಸೆ ಘೋಷಿಸಿ ಅದರಲ್ಲಿ 10% ಕೂಡ ಜಾರಿ ಮಾಡಿಲ್ಲ ಮೊದಲ ಕ್ಯಾಬಿನೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಅಂದಿದ್ದರು. ಬಿಜೆಪಿಯವರು ರೈತರ ಸಾಲ ಮನ್ನಾ ಮಾಡಿದ್ರಾ ಎಂದು ವಾಗ್ದಾಳಿ ನಡೆಸಿದರು. ಸಂಡೂರು ತಾಲೂಕಿನಲ್ಲಿ 22 ಕೋಟಿ ಸಾಲ ಮನ್ನಾ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago