ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿದ್ರೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಕೊರೊನಾ ನಿಗ್ರಹ, ಪ್ರವಾಹ ಪರಿಸ್ಥಿತಿಯನ್ನ ಸಮರ್ಪಕವಾಗಿ ಎದುರಿಸಲಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾದ ನಾಗಲೋಟ ಮುಂದುವರಿಯುತ್ತಿದೆ. ಅದೇ ರೀತಿ ಹೆಚ್ಚಿನ ಜನರ ಸಹ ಗುಣಮುಖರಾಗ್ತಿದ್ದಾರೆ. ಇದರ ಜೊತೆ ಜೊತೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಧಿಕ ಮಳೆ ಕೂಡ ಆಗ್ತಿದೆ. ಇದರ ಎಲ್ಲಾ ಹೊಣೆಗಾರಿಕೆಯನ್ನು ಸರ್ಕಾರ ಸಮರ್ಥವಾಗಿ ಮಾಡುತ್ತಿದೆ ಎಂದರು.
ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ರೂ ಕೂಡ ಅಲ್ಲಿಂದಲೇ ಸಂಬಂಧಪಟ್ಟ ಮಂತ್ರಿಗಳು ಹಾಗೂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಕಂದಾಯ ಸಚಿವ ಅಶೋಕ್ ಕೆಲ ಜಿಲ್ಲೆಗಳಿಗೆ ಇಂದಿನಿಂದ ಭೇಟಿ ಮಾಡ್ತಿದ್ದಾರೆ. ಸಿಎಂ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಮಗ್ರವಾದ ಮಾಹಿತಿ ಕಲೆಹಾಕುವುದರ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಪತ್ತಿಗೆ ಒಳಗಾಗುವ ಜನರನ್ನು ಸ್ಥಳಾಂತರ ಮಾಡುವ ಕಾಯಕ ಮಾಡಲಾಗುವುದು. ಹಾಗಾಗಿ ಸರ್ಕಾರ ಅಭಿವೃದ್ಧಿ ಸೇರಿದಂತೆ ಕೋರೋನಾ ನಿಗ್ರಹ ಸೇರಿದಂತೆ ಪ್ರವಾಹ ಪರಿಸ್ಥಿತಿಯನ್ನ ಸಮರ್ಪಕವಾಗಿ ನಿಭಾಯಿಸಲಿದೆ ಎಂದು ತಿಳಿಸಿದರು.
ಸಿಎಂ ಅವರು ದೈಹಿಕವಾಗಿ ಇರಬೇಕು ಅಂತಿಲ್ಲ. ಆಸ್ಪತ್ರೆಯಲ್ಲಿದ್ರೂ ಮಾನಸಿಕವಾಗಿ ಅವರ ಆದೇಶ ಅತಿ ಮುಖ್ಯ. ಅವರ ಏನು ಸೂಚನೆ ಕೊಡಬೇಕಾಗಿತ್ತೋ ಅದನ್ನು ಆಸ್ಪತ್ರೆಯಿಂದಲೇ ಕೊಟ್ಟಿದ್ದಾರೆ. ಆಸ್ಪತ್ರೆಯಲ್ಲಿದ್ರೂ ಸಿಎಂ ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ ಅಂತ ಜನ ಗಮನಿಸಬೇಕು ಅಂತ ಮನವಿ ಮಾಡಿಕೊಂಡರು
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…