ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ವಿಧಾನಸೌಧ ಎಲ್ಲಾ ದ್ವಾರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ನೇತೃತ್ವದಲ್ಲಿ ಭಾರಿ ಭದ್ರತೆ ಮಾಡಲಾಗಿದೆ. ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, 5 ಡಿಸಿಪಿಗಳು, 20 ಎಸಿಪಿಗಳು, 25 ಕೆಎಸ್ಆರ್ಪಿ ತುಕಡಿ, 21 ಸಿಎಆರ್ ತುಕಡಿ ನಿಯೋಜಿಸಲಾಗಿದೆ.
ಜತೆಗೆ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ವಾಟರ್ ಜೆಟ್ ಕೂಡ ನಿಯೋಜನೆ ಮಾಡಲಾಗಿದ್ದು, ವಿಧಾನಸೌಧ ಸುತ್ತ ಎರಡು ಕಿಮೀ ವ್ಯಾಪ್ತಿಯಲ್ಲಿ 114ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಸಂಭ್ರಮಾಚರಣೆ, ಘೋಷಣೆ ಕೂಗುವುದು, ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆಗೆ ಸೂಚಿಸಲಾಗಿದೆ.
ಮೈತ್ರಿ ಸರಕಾರ ಪತನದ ಭೀತಿ ಎದುರಿಸುತ್ತಿರುವ ಜೆಡಿಎಸ್ ಕೊನೇ ಅಸ್ತ್ರವಾಗಿ ಪಕ್ಷಾಂತರ ನಿಷೇಧ ಕಾಯ್ದೆ ಬಳಸಲು ಮುಂದಾಗಿದೆ. ತನ್ನ ಮೂವರು ಬಂಡಾಯ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿದೆ. ಸದ್ಯಕ್ಕೆ ಆಡಳಿತ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳೆರಡೂ ಸಂಖ್ಯಾಬಲ ತಮ್ಮ ಪರವಾಗಿಯೇ ಇದೆ ಎಂದು ಪ್ರತಿಪಾದಿಸುತ್ತಿವೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…