desha

ಮುಖ್ಯಾಧಿಕಾರಿಗಳೇ ಇದ್ಯಾವ ಸೀಮೆಯ ಸ್ವಚ್ಛ ಕಾಪು, ಶೌಚಾಲಯದ ನೀರು ರಸ್ತೆ ಮೇಲಿದೆ, ಜನ ಮೂಗು ಮುಚ್ಚಿ ನಡೆಯುವಂತಾಗಿದೆ ಗಮನಿಸುವಿರಾ…?

ಕಾಪು: ನಮ್ಮ ಕಾಪು ಸ್ವಚ್ಛ ಕಾಪು ಅಭಿಯಾನದಡಿ ರಾಜ್ಯಮಟ್ಟದಲ್ಲಿ ಹೆಸರು ಪಡೆದಿರುವ ಕಾಪು ಪುರಸಭೆ ಸ್ವಚ್ಛತೆಯಲ್ಲಿ ಹೆಸರು ಪಡಿದಿದೆ, ಆದರೇ ಕಾಪುವಿನ ಹೃದಯ ಭಾಗ ಸಾವಿರಾರು ಜನ ನಡೆದುಹೋಗುವ ಪೇಟೆಯ ಮಧ್ಯಭಾಗದಲ್ಲಿ ನಿರ್ಮಾಣವಾದ ಕಟ್ಟಡದ ಒಳಚರಂಡಿ ನೀರು, ಶೌಚಲಯದ ನೀರು ರಸ್ತೆಯ ಬದಿಯಲ್ಲಿ ವಿರಾಜಮಾನವಾಗಿ ಹರಿದು ಜನರನ್ನ ಮೂಗುಮುಚ್ಚಿಸಿಕೊಂಡು ನಡೆಯುವಂತೆ ಮಾಡಿದೆ.

ಹಾಗಾದರೇ ಆ ಕಟ್ಟಡ ಯಾವುದಂತೀರ ಕಾಪು ಪೇಟೆಯ ರಿಕ್ಷಾ ನಿಲ್ದಾಣದ ಬಳಿ ತಲೆ ಎತ್ತಿರುವ ಪ್ರತಿಷ್ಠಿತ ಪಿಡಬ್ಲ್ಯುಡಿ ಗುತ್ತಿದಾರನ ಒಡೆತನದ ಜನಾರ್ಧನ ಕಾಂಪ್ಲೆಕ್ಸ್. ಹೌದು ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಗಬ್ಬು ವಾಸನೆ ಮೂಗಿಗೆ ಬಡಿಯುವಂತೆ ಶೌಚಲಯದ ನೀರು ಮ್ಯಾನ್ ಹೋಲ್ ನಿಂದ ಹೊರಬಿದ್ದು ಅತ್ಯಂತ ಕೆಟ್ಟ ರೀತಿಯಲ್ಲಿ ವಾಸನೆ ಹೊಡೆಯುತ್ತಿದೆ ಮಾತ್ರವಲ್ಲದೆ ಈ ಕಟ್ಟಡದಲ್ಲಿರುವರುವ ಕೆಲವು ಕಚೇರಿಗಳಿಗೆ ತೆರಳಬೇಕಾದರೆ ಆ ನೀರನ್ನ ತುಳಿದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಆದರೇ ಸ್ವಚ್ಛ ಕಾಪು ಎಂದು ಬೊಬ್ಬೆಹೊಡೆದುಕೊಂಡು ಹೋಗುವ ಕಾಪು ಪುರಸಭೆ ಮುಖ್ಯಾಧಿಕಾರಿಗಳು, ಅಂಗಡಿ ಮುಂಗಟ್ಟುಗಳಿಗೆ, ಬೀದಿ ವ್ಯಾಪರಿಗಳಿಗೆ, ಹೋಟೆಲ್ ಮಾಲಕರಿಗೆ ಪ್ಲಾಸ್ಟೀಕ್ ಮತ್ತು ಸ್ವಚ್ಛತೆಯ ವಿಚಾರವಾಗಿ ಸದಾ ಕಿರಿಕ್ ಮಾಡುತ್ತಿರುವಾಗ ಈ ಗುತ್ತಿಗೆದಾರನ ಸಂಕೀರ್ಣದಲ್ಲಿ ಹೊರಸೂಸುವ ಈ ನೀರಿನ ಬಗ್ಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಿರುವುದು ಟೀಕೆಗೆ ಗುರಿಯಾಗಿದೆ.

ಗ್ರಾಹಕರಿಗೆ ತೊಂದರೆ
ಈ ಕಟ್ಟಡದ ಮೊದಲನೇ ಮಹಡಿಯಲ್ಲಿ ಕೆನರಾ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದೆ, ಮಾತ್ರವಲ್ಲದೆ ಮೆಡಿಕಲ್, ಜನರಲ್ ಸ್ಟೋರ್ಸ್,ಟೈಲರಿಂಗ್ ಶಾಪ್, ಜ್ಯುವೆಲ್ಲರಿ ಅಂಗಡಿಗಳು, ಇತರ ಕಚೇರಿಗಳು ಇದೆ. ದಿನಂಪ್ರತಿ ನೂರಾರು ಗ್ರಾಹಕರು ಇಲ್ಲಿ ಬಂದು ಹೋಗುವವರು ಇದ್ದಾg, ಅವರಿಗೆಲ್ಲರಿಗೂ ಈ ಗಬ್ಬು ವಾಸನೆಯ ನೀರಿನಿಂದ ಪಾದ ತೊಳೆದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ.ಆದರೂ ಕೂಡ ಪುರಸಭೆ ಮಾತ್ರ ಕಣ್ಣಿದ್ದು ಕುರುಡುತನ ಪ್ರದರ್ಶಿಸುತ್ತಿರುವುದು ಮಾತ್ರ ವಿಪರ್ಯಾಸ.

ಕಳೆದ ಮೂರು ದಿನದಿಂದ ಈ ಭಾಗದಲ್ಲಿ ಮ್ಯಾನ್ ಹೋಲ್ ತೆರೆದುಕೊಂಡಿದ್ದ ನಿನ್ನೆಯ ದಿನ ಪಾದಚಾರಿಯೊಬ್ಬ ನಡೆದುಕೊಂಡು ಹೋಗುವಾಗ ಕುಸಿದು ಬಿದ್ದ ಘಟನೆಯೂ ನಡೆದಿದೆ.
ಒಟ್ಟಾರೆಯಾಗಿ ಸ್ವಚ್ಛ ಕಾಪುವಿನ ಅಭಿಯಾನದಡಿ ಪುರಸಭೆ ಉಳ್ಳವರಿಗೊಂದು ನ್ಯಾಯ,ಇಲ್ಲದವರಿಗೊಂದು ನ್ಯಾಯ ಮಾಡುತ್ತಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago