desha

ಮುಖ್ಯಾಧಿಕಾರಿಗಳೇ ಇದ್ಯಾವ ಸೀಮೆಯ ಸ್ವಚ್ಛ ಕಾಪು, ಶೌಚಾಲಯದ ನೀರು ರಸ್ತೆ ಮೇಲಿದೆ, ಜನ ಮೂಗು ಮುಚ್ಚಿ ನಡೆಯುವಂತಾಗಿದೆ ಗಮನಿಸುವಿರಾ…?

ಕಾಪು: ನಮ್ಮ ಕಾಪು ಸ್ವಚ್ಛ ಕಾಪು ಅಭಿಯಾನದಡಿ ರಾಜ್ಯಮಟ್ಟದಲ್ಲಿ ಹೆಸರು ಪಡೆದಿರುವ ಕಾಪು ಪುರಸಭೆ ಸ್ವಚ್ಛತೆಯಲ್ಲಿ ಹೆಸರು ಪಡಿದಿದೆ, ಆದರೇ ಕಾಪುವಿನ ಹೃದಯ ಭಾಗ ಸಾವಿರಾರು ಜನ ನಡೆದುಹೋಗುವ ಪೇಟೆಯ ಮಧ್ಯಭಾಗದಲ್ಲಿ ನಿರ್ಮಾಣವಾದ ಕಟ್ಟಡದ ಒಳಚರಂಡಿ ನೀರು, ಶೌಚಲಯದ ನೀರು ರಸ್ತೆಯ ಬದಿಯಲ್ಲಿ ವಿರಾಜಮಾನವಾಗಿ ಹರಿದು ಜನರನ್ನ ಮೂಗುಮುಚ್ಚಿಸಿಕೊಂಡು ನಡೆಯುವಂತೆ ಮಾಡಿದೆ.

ಹಾಗಾದರೇ ಆ ಕಟ್ಟಡ ಯಾವುದಂತೀರ ಕಾಪು ಪೇಟೆಯ ರಿಕ್ಷಾ ನಿಲ್ದಾಣದ ಬಳಿ ತಲೆ ಎತ್ತಿರುವ ಪ್ರತಿಷ್ಠಿತ ಪಿಡಬ್ಲ್ಯುಡಿ ಗುತ್ತಿದಾರನ ಒಡೆತನದ ಜನಾರ್ಧನ ಕಾಂಪ್ಲೆಕ್ಸ್. ಹೌದು ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಗಬ್ಬು ವಾಸನೆ ಮೂಗಿಗೆ ಬಡಿಯುವಂತೆ ಶೌಚಲಯದ ನೀರು ಮ್ಯಾನ್ ಹೋಲ್ ನಿಂದ ಹೊರಬಿದ್ದು ಅತ್ಯಂತ ಕೆಟ್ಟ ರೀತಿಯಲ್ಲಿ ವಾಸನೆ ಹೊಡೆಯುತ್ತಿದೆ ಮಾತ್ರವಲ್ಲದೆ ಈ ಕಟ್ಟಡದಲ್ಲಿರುವರುವ ಕೆಲವು ಕಚೇರಿಗಳಿಗೆ ತೆರಳಬೇಕಾದರೆ ಆ ನೀರನ್ನ ತುಳಿದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಆದರೇ ಸ್ವಚ್ಛ ಕಾಪು ಎಂದು ಬೊಬ್ಬೆಹೊಡೆದುಕೊಂಡು ಹೋಗುವ ಕಾಪು ಪುರಸಭೆ ಮುಖ್ಯಾಧಿಕಾರಿಗಳು, ಅಂಗಡಿ ಮುಂಗಟ್ಟುಗಳಿಗೆ, ಬೀದಿ ವ್ಯಾಪರಿಗಳಿಗೆ, ಹೋಟೆಲ್ ಮಾಲಕರಿಗೆ ಪ್ಲಾಸ್ಟೀಕ್ ಮತ್ತು ಸ್ವಚ್ಛತೆಯ ವಿಚಾರವಾಗಿ ಸದಾ ಕಿರಿಕ್ ಮಾಡುತ್ತಿರುವಾಗ ಈ ಗುತ್ತಿಗೆದಾರನ ಸಂಕೀರ್ಣದಲ್ಲಿ ಹೊರಸೂಸುವ ಈ ನೀರಿನ ಬಗ್ಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಿರುವುದು ಟೀಕೆಗೆ ಗುರಿಯಾಗಿದೆ.

ಗ್ರಾಹಕರಿಗೆ ತೊಂದರೆ
ಈ ಕಟ್ಟಡದ ಮೊದಲನೇ ಮಹಡಿಯಲ್ಲಿ ಕೆನರಾ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದೆ, ಮಾತ್ರವಲ್ಲದೆ ಮೆಡಿಕಲ್, ಜನರಲ್ ಸ್ಟೋರ್ಸ್,ಟೈಲರಿಂಗ್ ಶಾಪ್, ಜ್ಯುವೆಲ್ಲರಿ ಅಂಗಡಿಗಳು, ಇತರ ಕಚೇರಿಗಳು ಇದೆ. ದಿನಂಪ್ರತಿ ನೂರಾರು ಗ್ರಾಹಕರು ಇಲ್ಲಿ ಬಂದು ಹೋಗುವವರು ಇದ್ದಾg, ಅವರಿಗೆಲ್ಲರಿಗೂ ಈ ಗಬ್ಬು ವಾಸನೆಯ ನೀರಿನಿಂದ ಪಾದ ತೊಳೆದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ.ಆದರೂ ಕೂಡ ಪುರಸಭೆ ಮಾತ್ರ ಕಣ್ಣಿದ್ದು ಕುರುಡುತನ ಪ್ರದರ್ಶಿಸುತ್ತಿರುವುದು ಮಾತ್ರ ವಿಪರ್ಯಾಸ.

ಕಳೆದ ಮೂರು ದಿನದಿಂದ ಈ ಭಾಗದಲ್ಲಿ ಮ್ಯಾನ್ ಹೋಲ್ ತೆರೆದುಕೊಂಡಿದ್ದ ನಿನ್ನೆಯ ದಿನ ಪಾದಚಾರಿಯೊಬ್ಬ ನಡೆದುಕೊಂಡು ಹೋಗುವಾಗ ಕುಸಿದು ಬಿದ್ದ ಘಟನೆಯೂ ನಡೆದಿದೆ.
ಒಟ್ಟಾರೆಯಾಗಿ ಸ್ವಚ್ಛ ಕಾಪುವಿನ ಅಭಿಯಾನದಡಿ ಪುರಸಭೆ ಉಳ್ಳವರಿಗೊಂದು ನ್ಯಾಯ,ಇಲ್ಲದವರಿಗೊಂದು ನ್ಯಾಯ ಮಾಡುತ್ತಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago