ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.
ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…