ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ. ನೀನು ಮಾತನಾಡಿದ ಕೃತಿಗೂ ನಿನ್ನ ನಾಲಿಗೆಗೂ ಎತ್ತ ಸಂಬಂಧವಯ್ಯ ಸದಾನಂದ. ಇದು ನನ್ನ ಹೊಸ ವಚನ, ಇದು ನನ್ನ ಕೂಡಲಸಂಗಮ ಬಸವವಾಣಿ ಎಂದು ಟಾಂಗ್ ಕೊಟ್ಟಿದ್ದಾರೆ.
ಸದಾನಂದಗೌಡರು ಯಡಿಯೂರಪ್ಪ ಕುಟುಂಬದ ವಿರುದ್ಧ ಮಾತನಾಡಿರುವುದನ್ನು ನಾನು ಬಿಚ್ಚಿಡುತ್ತೇನೆ. ನನಗಿಂತ ಕೆಟ್ಟದಾಗಿ ಮಾತನಾಡಿದ್ದಾರೆ. ದೀಪ ಆರಿದವರ ಬಗ್ಗೆ ನಾನು ಮಾತನಾಡಲ್ಲ. ನಿಮ್ಮ ದೀಪ ಈಗಾಗಲೆ ಆರಿಹೋಗಿದೆ. ನಾನು ಯಾರು ಜೊತೆನೂ ಹೊಂದಾಣಿಕೆ ಮಾಡಿಕೊಂಡಿಲ್ಲ. ನನ್ನ ವಿರುದ್ಧ ಮಾತನಾಡಿದವರ ಬಣ್ಣ ಬಯಲು ಮಾಡುತ್ತೇನೆ. ನೀವು ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ಇಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಆಣೆಪ್ರಮಾಣಕ್ಕೆ ಪಂಥಾಹ್ವಾನ ನೀಡಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…