Featured

ಮುಚ್ಚುವ ಭೀತಿ ಎದುರಿಸುತ್ತಿದ್ದ ಕನ್ನಡ ಶಾಲೆಯನ್ನು ದತ್ತು ಪಡೆದು ಮಾದರಿ ಶಾಲೆಯನ್ನಾಗಿ ರೂಪಿಸುವ ಕನಸು ಹೊತ್ತ ರಿಷಬ್ ಶೆಟ್ಟಿ ..

ಬೆಂಗಳೂರು : ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಸಿನಿಮಾ ಚಿತ್ರೀಕರಣಗೊಂಡಿದ್ದು ಮಂಜೇಶ್ವರ ಮತ್ತು ಮಂಗಳೂರು ಮಧ್ಯ ಭಾಗದಲ್ಲಿರುವ ಕೈರಂಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.ಈ ಕನ್ನಡ ಶಾಲೆ ಮುಚ್ಚುವ ಭೀತಿ ಎದುರಿಸುತ್ತಿತ್ತು.

ಇದೀಗ ಆ ಶಾಲೆಯನ್ನು ರಿಷಬ್ ಶೆಟ್ಟಿ ದತ್ತು ಪಡೆದುಕೊಂಡಿದ್ದಾರೆ. ಮಾದರಿ ಶಾಲೆಯನ್ನಾಗಿ ರೂಪಿಸುವ ಕನಸು ಹೊತ್ತಿದ್ದಾರೆ. ರಿಷಬ್ ಶೆಟ್ಟಿ ಚಿತ್ರದ ಚಿತ್ರೀಕರಣ ನಡೆಸುತ್ತಿದ್ದ ವೇಳೆಯಲ್ಲಿ 42 ಮಂದಿ ವಿದ್ಯಾರ್ಥಿಗಳಿದ್ದರು. ಆ ವರ್ಷ ಕೆಲವು ಮಂದಿ ಏಳನೇ ತರಗತಿ ಪಾಸಾಗಿ ಈಗ 25 ಮಂದಿ ವಿದ್ಯಾರ್ಥಿಗಳು ಉಳಿದುಕೊಂಡಿದ್ದರು. ವಿಪರ್ಯಾಸವೆಂದರೆ ಒಂದನೇ ತರಗತಿಗೆ ವಿದ್ಯಾರ್ಥಿಗಳನ್ನು ಅಡ್ಮಿಷನ್ ಮಾಡಿಕೊಳ್ಳುವುದನ್ನು ನಿಲ್ಲಿಸಲಾಗಿತ್ತು. ಬೇರೆ ದಾರಿಯೇ ಇಲ್ಲದೆ ಕೆಲವೇ ವರ್ಷಗಳಲ್ಲಿ ಈ ಶಾಲೆಯನ್ನು ಮುಚ್ಚಬೇಕಾಗುತ್ತಿತ್ತು. ಇಂಥಾ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ತನ್ನ ಪ್ರೀತಿಯ ಶಾಲೆಯನ್ನು ಉಳಿಸಿಕೊಳ್ಳುವ ಮನಸ್ಸು ಮಾಡಿದ್ದಾರೆ. ಕನ್ನಡ ಶಾಲೆ ಉಳಿಸಿ ಆಂದೋಲನದ ರೂವಾರಿ ಅನಿಲ್ ಶೆಟ್ಟಿಯವರ ಜೊತೆಗೂಡಿ ರಿಷಬ್ ಈ ಶಾಲೆಯನ್ನು ವಿಭಿನ್ನ ರೂಪಿಸಲಿದ್ದಾರೆ. ಕನ್ನಡ ಶಾಲೆ ಉಳಿಸಿ ಆಂದೋಲನದ ಕಾರ್ಯಕರ್ತರು ಈಗಾಗಲೇ ಎರಡು ಕನ್ನಡ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ. ಮತ್ತೊಂದಷ್ಟು ಕನ್ನಡ ಶಾಲೆ ಉಳಿಸಲು ಪ್ರಯತ್ನ ಪಡುತ್ತಿದ್ದಾರೆ. ಈ ಹಂತದಲ್ಲಿ ರಿಷಬ್ ಅವರ ಜೊತೆಯಾಗಿ ಮಾದರಿ ಕೆಲಸ ಮಾಡಿದ್ದಾರೆ.

ಈ ಕುರಿತು  ರಿಷಬ್ ಶೆಟ್ಟಿ ಹೇಳಿದ ಮಾತುಗಳು :

ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಸಿಗಬೇಕು ಅನ್ನುವುದು ನನ್ನ ನಿಲುವು. ಅದಕ್ಕಾಗಿ ಕನ್ನಡ ಶಾಲೆ ಉಳಿಯಬೇಕು.
ಚಿತ್ರೀಕರಣ ನಡೆಸುತ್ತಿದ್ದಾಗ 42 ಮಂದಿ ಇದ್ದರು. ಅವರನ್ನು ಚಿತ್ರದ ಹಾಡಿನಲ್ಲಿ ತೋರಿಸಿದ್ದೇವೆ. ಈಗ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಸ್ಥಿತಿ ಇದೆ.
ನಾನು ಕನ್ನಡ ಶಾಲೆಯಲ್ಲಿ ಓದಿದವನು. ಅದರ ಜೊತೆಗೆ ಈ ಶಾಲೆ ನನ್ನ ಹೃದಯಕ್ಕೆ ತುಂಬಾ ಹತ್ತಿರವಾದ ಶಾಲೆ. ಹಾಗಾಗಿ ಈ ಶಾಲೆ ದತ್ತು ಪಡೆಯಲು ನಿರ್ಧರಿಸಿದ್ದೇನೆ.
ಮತ್ತೆ ಈ ಶಾಲೆಯನ್ನು ಹೊಸತಾಗಿ ರೂಪಿಸುವ ಆಲೋಚನೆ ಇದೆ. ಪ್ರೀ ಸ್ಕೂಲ್ ಆರಂಭಿಸಬೇಕು. ಮಕ್ಕಳನ್ನು ಶಾಲೆಗೆ ಕರೆತರಲು ವಾಹನ ವ್ಯವಸ್ಥೆ ಮಾಡಿಸಬೇಕು.

ಹೊಸ ಥರ ಪೇಂಟ್ ಮಾಡಿಸಿ ಕ್ರಿಯೇಟಿವ್ ಆಗಿ ರೂಪಿಸಬೇಕು.
ಇದೆಲ್ಲಾ ಒಬ್ಬನಿಂದ ಆಗುವ ಕೆಲಸ ಅಲ್ಲ. ಈ ಶಾಲೆಯಲ್ಲಿ ಓದಿದವರೆಲ್ಲಾ ಮುಂದೆ ಬಂದರೆ ಚೆಂದ. ಈ ಶಾಲೆಯನ್ನು ಮಾದರಿಯಾಗಿ ಮಾಡಿದರೆ ಬೇರೆ ಊರಲ್ಲಿ ಬೇರೆಯವರು ಈ ಥರದ ಪ್ರಯತ್ನ ಮಾಡುತ್ತಾರೆ ಅನ್ನುವ ಆಸೆ ನನ್ನದು.

ಅ.18 ರಂದು ನಮ್ಮ ಚಿತ್ರತಂಡ ಆ ಶಾಲೆಯಲ್ಲಿ ನಡೆಯುವ ಶಾರದೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.-ಅವತ್ತು ಆ ಶಾಲೆಯ ಮಕ್ಕಳ ಪೋಷಕರಲ್ಲಿ ನೆರವು ನೀಡಲು ಕೇಳಿಕೊಳ್ಳುತ್ತೇನೆ. ಕನ್ನಡ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago