Featured

ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧ : ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ – Vishwanews24

ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧ : ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ

ಬೆಂಗಳೂರು: ಮುಜುರಾಯಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಪ್ರಕಟಿಸಿದೆ.

ಈ ಹಿಂದೆ ತಮಿಳುನಾಡಿನಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿತ್ತು. ಇದೀಗ ಕರ್ನಾಟಕದ ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಬಳಕೆ ನಿಷೇಧದ ಬಗ್ಗೆ ಈ ಹಿಂದೆ ಕೂಡ ಸಾಕಷ್ಟು ಚರ್ಚೆ ನಡೆದಿದ್ದವು, ಈಗ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧಹೇರಿ ಆದೇಶ ಪ್ರಕಟಿಸಿದೆ.

ಇತ್ತೀಚಿನ ದಿನಗಳಲ್ಲಿ ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಮಿತಿ ಮೀರಿದೆ. ಭಕ್ತರು ದೇವಾಲಯದ ಒಳಗೆ ಪ್ರವೇಶಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಮಾಡಲು ತೊಂದರೆಯಾಗುತ್ತಿದೆ. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಬಳಸಬಾರದು, ಸ್ವಿಚ್‌ ಆಫ್ ಮಾಡಿ, ದೇವರ ದರ್ಶನ ಪಡೆಯಬೇಕು ಎಂದು ಸೂಚಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago