ನವದೆಹಲಿ : ದೇಶಾದ್ಯಂತ ಉದ್ಯೋಗಸ್ಥ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಕಡ್ಡಾಯ ಮುಟ್ಟಿನ ರಜೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ, ಅಂತಹ ವಿಷಯವು ಸರ್ಕಾರಿ ನೀತಿಯ ವ್ಯಾಪ್ತಿಗೆ ಬರುತ್ತದೆ ಎಂದು ಅದು ಹೇಳಿದೆ.
ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎನ್ನುವ ಬೇಡಿಕೆಯನ್ನು ತಿರಸ್ಕರಿಸಿದೆ. ಅಂತಹ ಕಾನೂನು ಜಾರಿಗೆ ತಂದರೆ ಕಚೇರಿಗಳಲ್ಲಿ ಹೆಣ್ಣುಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವಲ್ಲಿ ಮಾಲೀಕರು ಹಿಂದೇಟು ಹಾಕುತ್ತಾರೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ.
ರಾಜ್ಯಗಳು ಮುಟ್ಟಿನ ರಜೆ ನಿಯಮಗಳನ್ನು ರೂಪಿಸಲು ನಿರ್ದೇಶನ ಕೋರಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ ಅರ್ಜಿಯನ್ನು ಇಂದು(ಮಾರ್ಚ್13)ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು ಇಂತಹ ಕಾನೂನು ದುಡಿಯುವ ಮಹಿಳೆಯರಲ್ಲಿ ಮಾನಸಿಕ ಭಯ ಅಥವಾ ಅನಿಸಿಕೆಯನ್ನು ಉಂಟುಮಾಡುತ್ತದೆ. ಅವರು ಪುರುಷರಿಗಿಂತ ಕಡಿಮೆ ಎಂಬ ಭಾವನೆಯನ್ನು ಹುಟ್ಟುಹಾಕುತ್ತದೆ ಎಂದು ವಾದಿಸಿದ್ದಾರೆ.
ಇದನ್ನೂ ಓದಿ:👇
ಮುಖ್ಯ ನ್ಯಾಯಮೂರ್ತಿಗಳು ಮಾತನಾಡಿ, ಈ ಕಾನೂನನ್ನು ಕಡ್ಡಾಯ ಮಾಡಿದರೆ ಹೆಣ್ಣುಮಕ್ಕಳಿಗೆ ಯಾರೂ ಕೆಲಸ ಕೊಡುವುದಿಲ್ಲ ಬದಲಾಗಿ, ಅಲ್ಲಿಗೆ ಅವರ ವೃತ್ತಿ ಜೀವನ ಕೊನೆಗೊಳ್ಳುತ್ತದೆ, ನೀವು ಮನೆಯಲ್ಲಿಯೇ ಕುಳಿತುಕೊಳ್ಳಿ ಎಂದು ಹೇಳುತ್ತಾರೆ ಎಂದರು.
ಜಾಗೃತಿ ಮೂಡಿಸುವುದು ಮತ್ತು ಸಂವೇದನೆ ಮೂಡಿಸುವುದು ಬೇರೆ, ಆದರೆ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಕಾನೂನನ್ನು ನೀವು ತಂದ ತಕ್ಷಣ, ಯಾರೂ ಅವರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ, ನಿರ್ದಿಷ್ಟವಾಗಿ ಹೇಳುವುದಾದರೆ, ಅರ್ಜಿದಾರರು ಹೆಣ್ಣುಮಕ್ಕಳು, ಅದು ವಿದ್ಯಾರ್ಥಿನಿಯರಾಗಿರಲಿ ಅಥವಾ ಕೆಲಸ ಮಾಡುವ ವೃತ್ತಿಪರರಾಗಿರಲಿ, ಮುಟ್ಟಿನ ಸಮಯದಲ್ಲಿ ರಜೆ ನೀಡುವುದನ್ನು ಕಡ್ಡಾಯಗೊಳಿಸಬೇಕೆಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ:👇
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…