ಬೆಂಗಳೂರು: ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು.
ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.
ಇನ್ನೂ ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…