ಬೆಂಗಳೂರು: ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು.
ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.
ಇನ್ನೂ ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…