ಬೆಂಗಳೂರು: ಮುಡಾ ಪ್ರಕರಣದ ಬಗ್ಗೆ ನಾನು ಆರಂಭದಲ್ಲೇ ಹೇಳಿದ್ದೆ. ಬಿಜೆಪಿ-ಜೆಡಿಎಸ್ನವರು ಪಾದಯಾತ್ರೆ ಮಾಡಿದಾಗಲೇ ಇದೊಂದು ರಾಜಕೀಯ ಪ್ರೇರಿತ ಅಂತಾ ಹೇಳಿದ್ದೆ. ಆದರೀಗ ಲೋಕಾಯುಕ್ತರೇ ಈ ಕೇಸ್ನಲ್ಲಿ ಯಾವುದೇ ಸಾಕ್ಷ್ಯ ಇಲ್ಲ ಎಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದರು.
ಮುಡಾ ಕೇಸಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿರುವ ವಿಚಾರ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು, ಇದು ಸಿದ್ದರಾಮಯ್ಯಗೆ ಸಂಬಂಧವಿಲ್ಲದ್ದು. ಅವರದ್ದು ಅವರು ಕ್ಲೇಮ್ ಮಾಡಿದ್ದಾರೆ.ಇಂಥದ್ದೇ ಜಾಗ ಕೊಡಿ ಎಂದು ಕೇಳಿಲ್ಲ. ಇದು ರಾಜಕೀಯ, ಅಧಿಕಾರ ಪ್ರಭಾವ ಬಳಸಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಕೇಸ್ನಲ್ಲಿ ಯಾವುದೇ ಎವಿಡೆನ್ಸ್ ಇಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮಾಡಿದ್ದಾರೆ ಎಂದರು.
ಹೈಕೋರ್ಟ್ ಕೂಡ ಇದೊಂದು ರಾಜಕೀಯ ಪ್ರೇರಿತ ಎಂದು ಈಗಾಗಲೇ ಹೇಳಿದೆ. ಇಂಡಿಪೆಂಡಂಟ್ ಬಾಡಿ ಎಂದು ಹೈಕೋರ್ಟ್ ತಿಳಿಸಿದೆ. ಪ್ರತಿಯೊಬ್ಬ ಅಧಿಕಾರಿಗಳು ಸಿಎಂ ಹೇಳಿದಂತೆ ಕೇಳ್ತಾರಾ? ಲೋಕಾಯುಕ್ತ ಸ್ವತಂತ್ರ ಸಂಸ್ಥೆ, ಇದರಲ್ಲಿ ಯಾವುದೇ ಪ್ರಭಾವ ಇಲ್ಲ ಎಂದರು. ಇದೇ ವೇಳೆ ವಿಜಯೇಂದ್ರ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ವಿಜಯೇಂದ್ರನ ವಿಚಾರ, ಇರಿಗೇಶನ್ ವಿಚಾರ ಆಮೇಲೆ ಮಾತನಾಡುತ್ತೇನೆ ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…