ಬೆಂಗಳೂರು: ಮುಡಾ ಪ್ರಕರಣದ ಬಗ್ಗೆ ನಾನು ಆರಂಭದಲ್ಲೇ ಹೇಳಿದ್ದೆ. ಬಿಜೆಪಿ-ಜೆಡಿಎಸ್ನವರು ಪಾದಯಾತ್ರೆ ಮಾಡಿದಾಗಲೇ ಇದೊಂದು ರಾಜಕೀಯ ಪ್ರೇರಿತ ಅಂತಾ ಹೇಳಿದ್ದೆ. ಆದರೀಗ ಲೋಕಾಯುಕ್ತರೇ ಈ ಕೇಸ್ನಲ್ಲಿ ಯಾವುದೇ ಸಾಕ್ಷ್ಯ ಇಲ್ಲ ಎಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದರು.
ಮುಡಾ ಕೇಸಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿರುವ ವಿಚಾರ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು, ಇದು ಸಿದ್ದರಾಮಯ್ಯಗೆ ಸಂಬಂಧವಿಲ್ಲದ್ದು. ಅವರದ್ದು ಅವರು ಕ್ಲೇಮ್ ಮಾಡಿದ್ದಾರೆ.ಇಂಥದ್ದೇ ಜಾಗ ಕೊಡಿ ಎಂದು ಕೇಳಿಲ್ಲ. ಇದು ರಾಜಕೀಯ, ಅಧಿಕಾರ ಪ್ರಭಾವ ಬಳಸಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಕೇಸ್ನಲ್ಲಿ ಯಾವುದೇ ಎವಿಡೆನ್ಸ್ ಇಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮಾಡಿದ್ದಾರೆ ಎಂದರು.
ಹೈಕೋರ್ಟ್ ಕೂಡ ಇದೊಂದು ರಾಜಕೀಯ ಪ್ರೇರಿತ ಎಂದು ಈಗಾಗಲೇ ಹೇಳಿದೆ. ಇಂಡಿಪೆಂಡಂಟ್ ಬಾಡಿ ಎಂದು ಹೈಕೋರ್ಟ್ ತಿಳಿಸಿದೆ. ಪ್ರತಿಯೊಬ್ಬ ಅಧಿಕಾರಿಗಳು ಸಿಎಂ ಹೇಳಿದಂತೆ ಕೇಳ್ತಾರಾ? ಲೋಕಾಯುಕ್ತ ಸ್ವತಂತ್ರ ಸಂಸ್ಥೆ, ಇದರಲ್ಲಿ ಯಾವುದೇ ಪ್ರಭಾವ ಇಲ್ಲ ಎಂದರು. ಇದೇ ವೇಳೆ ವಿಜಯೇಂದ್ರ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ವಿಜಯೇಂದ್ರನ ವಿಚಾರ, ಇರಿಗೇಶನ್ ವಿಚಾರ ಆಮೇಲೆ ಮಾತನಾಡುತ್ತೇನೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…