ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದ್ದರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್ಗೆ ಹೋಗ್ತೀನಿ ಎಂದು ಹೇಳಿದ್ದಾರೆ.
ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡ್ತೀವಿ. ಮುಂದಿನ ವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮಾಡ್ತೀವಿ ಎಂದು ತಿಳಿಸಿದ್ದಾರೆ.
ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ನುಡಿದಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…