ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದ್ದರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್ಗೆ ಹೋಗ್ತೀನಿ ಎಂದು ಹೇಳಿದ್ದಾರೆ.
ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡ್ತೀವಿ. ಮುಂದಿನ ವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮಾಡ್ತೀವಿ ಎಂದು ತಿಳಿಸಿದ್ದಾರೆ.
ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ನುಡಿದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…