ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಇರದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಲೋಕಾಯುಕ್ತ ತನಿಖೆಯನ್ನು ಬಿಜೆಪಿ ಪ್ರಶ್ನೆ ಮಾಡುವುದು ಸರಿನಾ ಎಂದು ಗೃಹ ಸಚಿವ ಪರಮೇಶ್ವರ್ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐಗೆ ಕೊಡುವ ವಿಚಾರದಲ್ಲಿ ಹೈಕೋರ್ಟ್ ಆದೇಶ ಮಾಡಿದೆ. ಸಿಬಿಐಗೆ ಕೊಡೋ ಅಗತ್ಯ ಇಲ್ಲ. ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಎರಡು ಏಜೆನ್ಸಿಗಳು ಒಂದೇ ವಿಷಯದಲ್ಲಿ ತನಿಖೆ ಮಾಡೋದು ಕಾನೂನಿಗೆ ವಿರುದ್ದ ಅಂತ ಹೇಳಿದ್ದಾರೆ. ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿದ್ದಾರೆ ಅಂದರೆ ಲೋಕಾಯುಕ್ತ ತನಿಖೆಯಲ್ಲಿ ಬಿಜೆಪಿ ಪ್ರಶ್ನೆ ಮಾಡ್ತಿದೆಯಾ ಅಂತ ಪ್ರಶ್ನೆ ಮಾಡಿದರು.
ಲೋಕಾಯುಕ್ತಗೆ ಸಿಕ್ಕ ಸಾಕ್ಷಿ ಆಧಾರದ ಮೇಲೆ ಅವರು ತೀರ್ಮಾನ ಮಾಡಿದ್ದಾರೆ .ಸಾಕ್ಷಿ, ಪುರಾವೆ ಇಲ್ಲ ಅಂದಾಗ ಅವರು ಒಂದು ತೀರ್ಮಾನ ಕೊಟ್ಟಿದ್ದಾರೆ. ಅದನ್ನ ಬಿಜೆಪಿ ಪ್ರಶ್ನೆ ಮಾಡೋದು ಎಷ್ಟು ಸರಿ? ಬಿಜೆಪಿ ಅವರಿಗೆ ಅನುಕೂಲ ಆದಾಗ ಎಲ್ಲವೂ ಸರಿ ಇರುತ್ತದೆ. ಇವರಿಗೆ ವಿರುದ್ಧವಾಗಿ ಬಂದರೆ ವಿಚಾರ ಸರಿ ಇರೋದಿಲ್ಲವಾ? ಇದು ಎಂತಹ ರಾಜಕೀಯ ಅಂತ ನನಗೆ ಗೊತ್ತಿಲ್ಲ ಅಂತ ಬಿಜೆಪಿ ಮೇಲೆ ಕಿಡಿಕಾರಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…