ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಇರದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಲೋಕಾಯುಕ್ತ ತನಿಖೆಯನ್ನು ಬಿಜೆಪಿ ಪ್ರಶ್ನೆ ಮಾಡುವುದು ಸರಿನಾ ಎಂದು ಗೃಹ ಸಚಿವ ಪರಮೇಶ್ವರ್ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐಗೆ ಕೊಡುವ ವಿಚಾರದಲ್ಲಿ ಹೈಕೋರ್ಟ್ ಆದೇಶ ಮಾಡಿದೆ. ಸಿಬಿಐಗೆ ಕೊಡೋ ಅಗತ್ಯ ಇಲ್ಲ. ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಎರಡು ಏಜೆನ್ಸಿಗಳು ಒಂದೇ ವಿಷಯದಲ್ಲಿ ತನಿಖೆ ಮಾಡೋದು ಕಾನೂನಿಗೆ ವಿರುದ್ದ ಅಂತ ಹೇಳಿದ್ದಾರೆ. ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿದ್ದಾರೆ ಅಂದರೆ ಲೋಕಾಯುಕ್ತ ತನಿಖೆಯಲ್ಲಿ ಬಿಜೆಪಿ ಪ್ರಶ್ನೆ ಮಾಡ್ತಿದೆಯಾ ಅಂತ ಪ್ರಶ್ನೆ ಮಾಡಿದರು.
ಲೋಕಾಯುಕ್ತಗೆ ಸಿಕ್ಕ ಸಾಕ್ಷಿ ಆಧಾರದ ಮೇಲೆ ಅವರು ತೀರ್ಮಾನ ಮಾಡಿದ್ದಾರೆ .ಸಾಕ್ಷಿ, ಪುರಾವೆ ಇಲ್ಲ ಅಂದಾಗ ಅವರು ಒಂದು ತೀರ್ಮಾನ ಕೊಟ್ಟಿದ್ದಾರೆ. ಅದನ್ನ ಬಿಜೆಪಿ ಪ್ರಶ್ನೆ ಮಾಡೋದು ಎಷ್ಟು ಸರಿ? ಬಿಜೆಪಿ ಅವರಿಗೆ ಅನುಕೂಲ ಆದಾಗ ಎಲ್ಲವೂ ಸರಿ ಇರುತ್ತದೆ. ಇವರಿಗೆ ವಿರುದ್ಧವಾಗಿ ಬಂದರೆ ವಿಚಾರ ಸರಿ ಇರೋದಿಲ್ಲವಾ? ಇದು ಎಂತಹ ರಾಜಕೀಯ ಅಂತ ನನಗೆ ಗೊತ್ತಿಲ್ಲ ಅಂತ ಬಿಜೆಪಿ ಮೇಲೆ ಕಿಡಿಕಾರಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…