ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಮುಖ್ಯಮಂತ್ರಿಗಳ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.
ಜಾರಿ ನಿರ್ದೇಶನಾಲಯದ ನೋಟಿಸ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದರು.
ನಾನು ಮತ್ತು ಕಾಂಗ್ರೆಸ್ ಪಕ್ಷ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಯಾಕೆ ನೋಟಿಸ್ ನೀಡಿದ್ದಾರೆ ಎಂಬುದಕ್ಕೆ ಇಡಿ ಮತ್ತು ಸಿಬಿಐ ಅವರನ್ನೇ ಕೇಳಬೇಕು ಎಂದು ಹೇಳಿದರು.
ನನಗೆ ನೋಟಿಸ್ ಬಂದಾಗ ಆಶ್ಚರ್ಯ ಆಯ್ತು. ಹಗರಣ ನಡೆದಾಗ ನಾನು ಮಂತ್ರಿ ಆಗಿರಲಿಲ್ಲ. ಸೈಟನ್ನು ಪಡೆದಿಲ್ಲ, ಕೊಟ್ಟಿಲ್ಲ. ಸೈಟ್ ಹಂಚಿಕೆ ಗೊಂದಲ ಆದ ಮೇಲೆ ಸೈಟ್ ವಾಪಸ್ ಕೂಡ ಕೊಟ್ಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ ಹಾಗಾಗಿ ಸ್ಟೇ ಕೊಟ್ಟಿದ್ದಾರೆ. ನನಗೆ ಕೊಟ್ಟಿರುವುದು ಒಂದೇ ನೋಟಿಸ್, ಸಿಎಂ ಪತ್ನಿಗೆ ಎರಡನೇ ನೋಟಿಸ್ ಕೊಟ್ಟಿದ್ದಾರಾ ಎಂದು ನನಗೆ ಗೊತ್ತಿಲ್ಲ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…