ಮೈಸೂರು: ಮುಡಾ ಹಗರಣದ ಬಗ್ಗೆ ಪತ್ರ ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಕಾಂತ ರೆಡ್ಡಿಯನ್ನು ನೇಮಕ ಮಾಡಿದೆ.
ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮಿ ಕಾಂತರೆಡ್ಡಿ ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಬೆಂಗಳೂರಿನ ಕೆಯುಐಡಿಎಫ್ಸಿಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಲಕ್ಷ್ಮಿಕಾಂತ್ ರೆಡ್ಡಿಯನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ಮುಡಾ ಹಗರಣದ ಬಗ್ಗೆ ಡಿಸಿ ಕೆ.ವಿ ರಾಜೇಂದ್ರ ಸರ್ಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದರು. ಮುಡಾದ 50:50 ಸೈಟು ವಿಷಯದಲ್ಲಿ ಸರ್ಕಾರದ ಕಾರ್ಯದರ್ಶಿಗೂ ಪತ್ರ ಬರೆದಿದ್ದರು. ಡಿಸಿ ಪತ್ರ ಬೆಳಕಿಗೆ ಬಂದ ಮರುದಿನವೇ ವರ್ಗಾವಣೆಯಾಗಿದೆ. ಕೆವಿ ರಾಜೇಂದ್ರ ಸೇರಿದಂತೆ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಏನಿದು ಮುಡಾ ಹಗರಣ..?
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50:50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೇ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳು ಇವೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…