ಮುಡಾ ಹಗರಣ: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ – vishwanews24
ಮುಡಾ ಹಗರಣ: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ
ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ.
ಮಂಗಳವಾರ(ನ.5) ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಶಿಗ್ಗಾವಿ ಚುನಾವಣಾ ಪ್ರಚಾರಕ್ಕೆ ತೆರಳಿದರು.
ಮಾಧ್ಯಮದವರನ್ನು ಕಂಡು ನೇರವಾಗಿ ಕಾರಿನತ್ತ ತೆರಳಿದ್ದಾರೆ, ಈ ವೇಳೆ ಲೋಕಾಯುಕ್ತರು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಕುರಿತ ಸುದ್ದಿಗಾರರ ಪ್ರಶ್ನೆಗೆ ಲೋಕಾಯುಕ್ತ ಕಚೇರಿಗೆ ನಾಳೆ 10 ಗಂಟೆಗೆ ಹೋಗುತ್ತಿದ್ದೇನೆ ಎಂದರು. ನೋಟಿಸ್ ಕುರಿತು ಪ್ರತಿಕ್ರಿಯೆ ನೀಡಲು ಸೋಮವಾರ ಸಂಜೆಯಿಂದಲೂ ನಿರಾಕರಿಸುತ್ತಿದ್ದಾರೆ.
ದತ್ತಮಾಲಾ ಅಭಿಯಾನ ಆರಂಭ: ನ. 9 - 11ರವರೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಭೇಟಿ ನಿರ್ಬಂಧ – vishwanews24
