ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.
ನೋಟಿಸ್ನಲ್ಲಿ ಏನಿದೆ?
ಜ 9ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್ಗೆ ಪ್ರತಿಯಾಗಿ ಸಿಎಂ ಪತ್ನಿ ಪಾರ್ವತಿ ದಾಖಲೆ ಸಂಗ್ರಹಿಸಲು ಎರಡು ವಾರ ಕಾಲಾವಕಾಶ ಕೋರಿದ್ದರು. ವಯಸ್ಸಾಗಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು. ಇಡಿ ಸಿಎಂ ಪತ್ನಿಗೆ ಎರಡನೇ ನೋಟಿಸ್ ನೀಡಿತ್ತು. ಜನವರಿ 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಹೇಳಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…