ಕೊಣಾಜೆ: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾಗಿರುವ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ಎಂದು ಗುರುತಿಸಲಾಗಿದೆ.
4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದರು.
ಮುಡಿಪು ಕೇಂದ್ರದಲ್ಲಿದ್ದ 4 ಮಕ್ಕಳನ್ನು ಕುರ್ನಾಡು ಅಂಗನವಾಡಿಗೆ ಬಿಟ್ಟು ಕರೆದುಕೊಂಡು ಬರಲು ಆಕೆಯೇ ಹೋಗಿ ಬರುತ್ತಿದ್ದು, ಎಂದಿನಂತೆ ಸೆ.19 ರಂದು ಮಧ್ಯಾಹ್ನ 2.45 ಗಂಟೆಗೆ ಮಕ್ಕಳನ್ನು ಕರೆದುಕೊಂಡು ಬರಲೆಂದು ಅಂಗನವಾಡಿಗೆ ಹೋದವಳು ಅಲ್ಲಿಗೂ ಹೋಗದೆ ಮತ್ತೆ ಕೇಂದ್ರಕ್ಕೂ ವಾಪಸ್ಸು ಬಂದಿರಲಿಲ್ಲ ಎಂದು ದೂರಲಾಗಿದೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…