Featured

ಮುತಾಲಿಕ್ ರವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನಸಭೆಗೆ ಭಗವಾಧ್ವಜ ಮೂಲಕ ಕಳುಹಿಸಿವುದು ನಿಶ್ಚಿತ : ಉಡುಪಿ ಶ್ರೀರಾಮ ಸೇನೆ – VIshwanews24

ಮುತಾಲಿಕ್ ರವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನಸಭೆಗೆ ಭಗವಾಧ್ವಜ ಮೂಲಕ ಕಳುಹಿಸಿವುದು ನಿಶ್ಚಿತ : ಉಡುಪಿ ಶ್ರೀರಾಮ ಸೇನೆ

ಉಡುಪಿ: ಹಿಂದುತ್ವಕ್ಕಾಗಿ ತನ್ನ ಸರ್ವಸ್ವವನ್ನೇ ತ್ಯಾಗ ಮಾಡಿರುವ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ನಮಗೆಲ್ಲ ಅತ್ಯಂತ ಸಂತೋಷದ ವಿಷಯ. ಅದರಲ್ಲೂ ಧರ್ಮೋದ್ಧಾರಕ ಶ್ರೀಕೃಷ್ಣನ ನಾಡಾದ ಉಡುಪಿಯ ನೆರೆಯ ಕ್ಷೇತ್ರವಾದ ಕಾರ್ಕಳದಲ್ಲಿ ಸ್ಪರ್ಧಿಸುತ್ತಿರುವುದು ಶ್ರೀಕೃಷ್ಣನ ಅಭಯವೇ ಹೊರತು ಬೇರೇನಿಲ್ಲ.

ಮುತಾಲಿಕ್ ರವರು ಕಾರ್ಕಳದಲ್ಲಿ ಸ್ಪರ್ಧೆಯನ್ನು ಖಚಿತ ಮಾಡಿದ ನಂತರ ಉಡುಪಿ ಜಿಲ್ಲಾ ಶ್ರೀರಾಮ ಸೇನೆಯು ಅವರ ಹಿಂದಿದೆ. ನಮಗೆ ವ್ಯಕ್ತಿ, ಪಕ್ಷಕಿಂತ ಹಿಂದುತ್ವನೇ ಮುಖ್ಯ ಎಂಬ ಆಧಾರದಲ್ಲಿ ಹಿಂದುತ್ವದ ಪ್ರಬಲ ನಾಯಕನನ್ನು ವಿಧಾನಸಭೆಗೆ ಕಳಿಸುವುದು ನಾವಂತೂ ಖಚಿತ. ಇದರಲ್ಲಿ ನಮ್ಮ ಕಾರ್ಯಕರ್ತರು, ಮುತಾಲಿಕ್ ಅಭಿಮಾನಿಗಳು, ಸರ್ವ ಹಿಂದೂ ಅಭಿಮಾನಿಗಳಿಗೆ ಯಾವುದೇ ಸಂಶಯ ಬೇಡ. 2 ದಿವಸದ ಹಿಂದೆ ಕಾರ್ಕಳದಲ್ಲಿ ಮುತಾಲಿಕರವರ ಸಂಘಟನಾ ಕಾರ್ಯಾಲಯ ಪಾಂಚಜನ್ಯ ಉದ್ಘಾಟನೆಗೊಂಡಿತ್ತು. ಇದರಲ್ಲಿ 150ಕ್ಕೂ ಹೆಚ್ಚು ಉಡುಪಿಯ ಶ್ರೀರಾಮ ಸೇನೆಯ ಕಾರ್ಯಕರ್ತರು ಭಾಗವಹಿಸಿರುವುದು ಇದಕ್ಕೆಲ್ಲ ಸಾಕ್ಷಿಯಾಗಿದೆ.

ಅದಲ್ಲದೆ ರಾಜ್ಯದ 22 ಜಿಲ್ಲೆಗಳ ಶ್ರೀರಾಮಸೇನೆಯ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿರುವುದು ವಿಶೇಷವಾಗಿದೆ. ಅಷ್ಟೇ ಅಲ್ಲದೆ ಸುಮಾರು ನೂರಕ್ಕಿಂತಲೂ ಹೆಚ್ಚು ಕಾರ್ಯಕರ್ತರು ರಾಜ್ಯದಿಂದ ಪೂರ್ಣವಾದಿಯಾಗಿ ದುಡಿಯಲು ಈಗಾಗಲೇ ಬೀಡು ಬಿಟ್ಟಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯಕರ್ತರು ಮುಂದಿನ ಕೆಲವೇ ದಿನಗಳಿಂದ ಬೂತ್ ಮಟ್ಟದಿಂದ ಪ್ರಚಾರವನ್ನು ಕೈಗೊಳ್ಳಲಿದ್ದಾರೆ. ಒಬ್ಬ ಪ್ರಖರ ಹಿಂದೂ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರು ನಮ್ಮದೇ ನೆರೆಯ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ಉಡುಪಿ ಜಿಲ್ಲೆಯವರಿಗೆ ಹೆಮ್ಮೆಯ ವಿಷಯ. ಹಾಗಾಗಿ ಕಾರ್ಕಳ ಕ್ಷೇತ್ರದ ಅಪಾರ ಹಿಂದೂ ಅಭಿಮಾನಿಗಳು, ವಿವಿಧ ಸಂಘಟನೆಯ/ ಪಕ್ಷಗಳ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಮುತಾಲಿಕ್ ರವರನ್ನು ಬೆಂಬಲಿಸಿರುವುದು ಅತ್ಯಂತ ಸಂತೋಷದ ವಿಷಯ.

ಮುತಾಲಿಕ್ ರವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನಸಭೆಗೆ ಭಗವಾಧ್ವಜ ಮೂಲಕ ಕಳುಹಿಸಿವುದು ನಿಶ್ಚಿತ. ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ ಮುತಾಲಿಕ್ ರವರ ಹಿಂದುತ್ವದ ಗೆಲುವು ನಿಶ್ಚಿತ ಎಂದು ಶ್ರೀರಾಮಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಹಾಗೂ ಜಿಲ್ಲಾ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago