ಚಿತ್ರದುರ್ಗ : ಜಾಮೀನಿನಲ್ಲಿ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿದ್ದ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಇದೀಗ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ನ.16 ರಂದು ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಶ್ರೀಗಳಿಗೆ ಎರಡನೇ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ.
ಇನ್ನು ಮುರುಘಾ ಶ್ರೀ ಅವರ ಬಿಡುಗಡೆಗೆ ಮೊದಲು ಎರಡನೇ ಪೋಕ್ಸೋ ಪ್ರಕರಣದ ಬಾಡಿ ವಾರೆಂಟ್ ಕುರಿತ ವಿಚಾರಣೆ ನಡೆಯುತ್ತಿತ್ತು. ವಿಚಾರಣೆ ನಡುವೆಯೇ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನ.18 ರಂದು ನಡೆದ ನ್ಯಾಯಾಲಯ ಕಲಾಪದ ವೇಳೆ ಜಿಲ್ಲಾ ಕಾರಾಗೃಹದ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆಗೆ ಆದೇಶಿಸಲಾಗಿತ್ತು.
ಇನ್ನು ಇದೇ ಪ್ರಕರಣದ ಆದೇಶವನ್ನು ನ.20 ಸೋಮವಾರಕ್ಕೆ ಕಾಯ್ದಿರಿಸಿದ್ದ ನ್ಯಾಯಾಲಯ ನಾಳೆಯೊಳಗೆ ಬಂಧಿಸಿ ಕರೆತರುವಂತೆ ಆದೇಶಿಸಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…