Featured

ಮುರುಘಾ ಶ್ರೀಗೆ ಮತ್ತೆ 4 ತಿಂಗಳು ಜೈಲು : ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ – Vishwanews24

ಮುರುಘಾ ಶ್ರೀ ಮತ್ತೆ 4 ತಿಂಗಳು ಜೈಲಿಗೆ: ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಬೆಂಗಳೂರು : ರಾಜ್ಯದಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘರಾಜೇಂದ್ರ ಶರಣರಿಗೆ ಹೈಕೋರ್ಟ್‌ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ.

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರ ಸೆಪ್ಟೆಂಬರ್‌ 1ರಂದು ಮುರುಘಾ ಶ್ರೀ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ ಮುರುಘಾ ಶ್ರೀ ಕಳೆದ ನವೆಂಬರ್ 16ರಂದು ಜೈಲಿನಿಂದ ಹೊರಗೆ ಬಂದಿದ್ದರು. ಇದಾದ ನಂತರ ಚಿತ್ರದುರ್ಗ ಮಠದ ಅಧಿಕಾರವನ್ನು ಹಿಡಿಯಲೂ ಮುಂದಾಗಿದ್ದರು. ಆದರೆ, ಪೋಕ್ಸೋ ಕೇಸ್ ಇದ್ದರೂ ಹೈಕೋರ್ಟ್‌ನಿಂದ ಜಾಮೀನಿನ ಮೇಲೆ ಹೊರಗೆ ಬಂದು ಸಾಕ್ಷಿ ನಾಶ ಮಾಡುತ್ತಿದ್ದಾರೆ ಎಂದು ಪೋಕ್ಸೋ ಕೇಸ್ ದಾಖಲಿಸಿದ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ಮುರುಘಾ ಶ್ರೀಗೆ ಹೈಕೋರ್ಟ್‌ನಿಂದ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳಿಸುವಂತೆ ಸೂಚನೆಯನ್ನು ನೀಡಿದೆ.

ಇನ್ನು ಮುರುಘ ಶ್ರೀಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಮುನಃ ಅವರನ್ನು 4 ತಿಂಗಳ ಕಾಲಾವಧಿಗೆ ಜೈಲಿಗೆ ಕಳುಹಿಸಬೇಕು. ಈ ಅವಧಿಯೊಳಗೆ ಸಂತ್ರಸ್ಥೆಯರು ಹಾಗೂ ಪೋಷಕರ ವಿಚಾರಣೆಗೆ ಮುಗಿಸಬೇಕು. ಒಂದು ವೇಳೆ ಪ್ರಕರಣದ ವಿಚಾರಣೆಯು ಮುಗಿಯದ್ದಿದ್ದ ಪಕ್ಷದಲ್ಲಿ ಜೈಲು ಶಿಕ್ಷೆ ಅವಧಿಯನ್ನು ವಿಸ್ತರಣೆ ಮಾಡುವ ಕುರಿತು ಸುಪ್ರೀಂ ಕೋರ್ಟ್‌ ಗಮನಕ್ಕೆ ತರಬೇಕು ಎಂದು ಆದೇಶಿಸಲಾಗಿದೆ. ಈ ಆದೇಶಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ನಿಂದ ಸೂಚನೆ ನೀಡಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago