ಭಟ್ಕಳ: ಮುರುಡೇಶ್ವರದಲ್ಲಿ ಮಂಗಳವಾರ ಸಂಜೆ ಸಮುದ್ರಪಾಲಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಇಂದು ಪತ್ತೆಯಾಗಿವೆ.
ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯಾ (15), ಮತ್ತು ವಂದನಾ (15) ಮೃತಪಟ್ಟವರು.
ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಕಣ್ಮರೆಯಾಗಿದ್ದ ವಿದ್ಯಾರ್ಥಿನಿಯರ ಪತ್ತೆಗಾಗಿ ಕರಾವಳಿ ಕಾವಲು ಪೊಲೀಸ್ ಪಡೆಯು ಸ್ಥಳೀಯ ಮೀನುಗಾರರ ಸಹಕಾರದಲ್ಲಿ ಇಂದು ಮುಂಜಾನೆಯಿಂದ ಶೋಧ ಮುಂದುವರಿಸಿದ್ದರು. ಇಂದು ಪೂರ್ವಾಹ್ನ 11:30ೆ ಸುಮಾರಿಗೆ ದೀಕ್ಷಾ ಹಾಗೂ ಲಾವಣ್ಯಾರ ಮೃತದೇಹಗಳು ಇಲ್ಲಿನ ಆರ್.ಎನ್.ಎಸ್. ರೆಸಿಡೆನ್ಸಿ ಹಿಂಭಾಗದ ಸಮುದ್ರ ತೀರದ ಕಲ್ಲುಬಂಡೆ ಸಮೀಪ ಪತ್ತೆಯಾಗಿವೆ. ವಂದನಾ ಅವರ ಮೃತದೇಹ ಸಮೀಪದ ಗುಡ್ಡದ ಕೆಳಭಾಗದಲ್ಲಿ ಪತ್ತೆಯಾಗಿದೆ.
ಇವರೊಂದಿಗೆ ಸಮುದ್ರಪಾಲಾಗಿದ್ದ ಇನ್ನೋರ್ವ ವಿದ್ಯಾರ್ಥಿನಿ ಶ್ರಾವಂತಿ ಗೋಪಾಲಪ್ಪ(15) ಮೃತಪಟ್ಟಿದ್ದಾಳೆ. ಮಂಗಳವಾರ ಸಮುದ್ರದಲ್ಲಿ ಸ್ನಾನಕ್ಕಿಳಿದ ಒಟ್ಟು ಏಳು ವಿದ್ಯಾರ್ಥಿಗಳು ಅಲೆಗಳ ಸುಳಿಗೆ ಸಿಲುಕಿದ್ದರು. ಈ ಪೈಕಿ ಮೂವರನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹಾಗೂ ಉಪವಿಭಾಗಾಧಿಕಾರಿ ಡಾ. ನಯನಾ ಭೇಟಿ ನೀಡಿ, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…