Featured

ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ – vishwanews24

ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

ಭಟ್ಕಳ: ಮುರುಡೇಶ್ವರದಲ್ಲಿ ಮಂಗಳವಾರ ಸಂಜೆ ಸಮುದ್ರಪಾಲಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಇಂದು ಪತ್ತೆಯಾಗಿವೆ.

ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯಾ (15), ಮತ್ತು ವಂದನಾ (15) ಮೃತಪಟ್ಟವರು.

ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಕಣ್ಮರೆಯಾಗಿದ್ದ ವಿದ್ಯಾರ್ಥಿನಿಯರ ಪತ್ತೆಗಾಗಿ ಕರಾವಳಿ ಕಾವಲು ಪೊಲೀಸ್ ಪಡೆಯು ಸ್ಥಳೀಯ ಮೀನುಗಾರರ ಸಹಕಾರದಲ್ಲಿ ಇಂದು ಮುಂಜಾನೆಯಿಂದ ಶೋಧ ಮುಂದುವರಿಸಿದ್ದರು. ಇಂದು ಪೂರ್ವಾಹ್ನ 11:30ೆ ಸುಮಾರಿಗೆ ದೀಕ್ಷಾ ಹಾಗೂ ಲಾವಣ್ಯಾರ ಮೃತದೇಹಗಳು ಇಲ್ಲಿನ ಆರ್.ಎನ್.ಎಸ್. ರೆಸಿಡೆನ್ಸಿ ಹಿಂಭಾಗದ ಸಮುದ್ರ ತೀರದ ಕಲ್ಲುಬಂಡೆ ಸಮೀಪ ಪತ್ತೆಯಾಗಿವೆ. ವಂದನಾ ಅವರ ಮೃತದೇಹ ಸಮೀಪದ ಗುಡ್ಡದ ಕೆಳಭಾಗದಲ್ಲಿ ಪತ್ತೆಯಾಗಿದೆ.

ಇವರೊಂದಿಗೆ ಸಮುದ್ರಪಾಲಾಗಿದ್ದ ಇನ್ನೋರ್ವ ವಿದ್ಯಾರ್ಥಿನಿ ಶ್ರಾವಂತಿ ಗೋಪಾಲಪ್ಪ(15) ಮೃತಪಟ್ಟಿದ್ದಾಳೆ. ಮಂಗಳವಾರ ಸಮುದ್ರದಲ್ಲಿ ಸ್ನಾನಕ್ಕಿಳಿದ ಒಟ್ಟು ಏಳು ವಿದ್ಯಾರ್ಥಿಗಳು ಅಲೆಗಳ ಸುಳಿಗೆ ಸಿಲುಕಿದ್ದರು. ಈ ಪೈಕಿ ಮೂವರನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹಾಗೂ ಉಪವಿಭಾಗಾಧಿಕಾರಿ ಡಾ. ನಯನಾ ಭೇಟಿ ನೀಡಿ, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago