ಭಟ್ಕಳ: ಮುರುಡೇಶ್ವರದಲ್ಲಿ ಮಂಗಳವಾರ ಸಂಜೆ ಸಮುದ್ರಪಾಲಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಇಂದು ಪತ್ತೆಯಾಗಿವೆ.
ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯಾ (15), ಮತ್ತು ವಂದನಾ (15) ಮೃತಪಟ್ಟವರು.
ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಕಣ್ಮರೆಯಾಗಿದ್ದ ವಿದ್ಯಾರ್ಥಿನಿಯರ ಪತ್ತೆಗಾಗಿ ಕರಾವಳಿ ಕಾವಲು ಪೊಲೀಸ್ ಪಡೆಯು ಸ್ಥಳೀಯ ಮೀನುಗಾರರ ಸಹಕಾರದಲ್ಲಿ ಇಂದು ಮುಂಜಾನೆಯಿಂದ ಶೋಧ ಮುಂದುವರಿಸಿದ್ದರು. ಇಂದು ಪೂರ್ವಾಹ್ನ 11:30ೆ ಸುಮಾರಿಗೆ ದೀಕ್ಷಾ ಹಾಗೂ ಲಾವಣ್ಯಾರ ಮೃತದೇಹಗಳು ಇಲ್ಲಿನ ಆರ್.ಎನ್.ಎಸ್. ರೆಸಿಡೆನ್ಸಿ ಹಿಂಭಾಗದ ಸಮುದ್ರ ತೀರದ ಕಲ್ಲುಬಂಡೆ ಸಮೀಪ ಪತ್ತೆಯಾಗಿವೆ. ವಂದನಾ ಅವರ ಮೃತದೇಹ ಸಮೀಪದ ಗುಡ್ಡದ ಕೆಳಭಾಗದಲ್ಲಿ ಪತ್ತೆಯಾಗಿದೆ.
ಇವರೊಂದಿಗೆ ಸಮುದ್ರಪಾಲಾಗಿದ್ದ ಇನ್ನೋರ್ವ ವಿದ್ಯಾರ್ಥಿನಿ ಶ್ರಾವಂತಿ ಗೋಪಾಲಪ್ಪ(15) ಮೃತಪಟ್ಟಿದ್ದಾಳೆ. ಮಂಗಳವಾರ ಸಮುದ್ರದಲ್ಲಿ ಸ್ನಾನಕ್ಕಿಳಿದ ಒಟ್ಟು ಏಳು ವಿದ್ಯಾರ್ಥಿಗಳು ಅಲೆಗಳ ಸುಳಿಗೆ ಸಿಲುಕಿದ್ದರು. ಈ ಪೈಕಿ ಮೂವರನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹಾಗೂ ಉಪವಿಭಾಗಾಧಿಕಾರಿ ಡಾ. ನಯನಾ ಭೇಟಿ ನೀಡಿ, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…