ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಏತನ್ಮಧ್ಯೆ, ಮಕ್ಕಳ ಪೋಷಕರು ಹಾಗೂ ಶಾಸಕ ಸಮೃದ್ಧಿ ಮಂಜುನಾಥ್ ಬುಧವಾರ ಮುರುಡೇಶ್ವರ ತಲುಪಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಡಳಿತದ ನೆರವಿನಿಂದ ಉಳಿದ ಮೂರು ಜನ ವಿದ್ಯಾರ್ಥಿನಿಯರ ಶವಕ್ಕಾಗಿ ಹುಡುಕಾಟ ಸಾಗಿದೆ. ಪ್ರವಾಸಕ್ಕೆ ಹೋಗಿದ್ದ ಇತರ ಮಕ್ಕಳನ್ನು ಮರಳಿ ಊರಿಗೆ ಕಳಿಸಲು ಜಿಲ್ಲಾಡಳಿತ ಹಾಗೂ ಶಾಸಕ ಸಮೃದ್ದಿ ಮಂಜುನಾಥ್ ಸಿದ್ಧತೆ ಮಾಡುತ್ತಿದ್ದಾರೆ.
ಪ್ರಾಂಶುಪಾಲೆ ಅಮಾನತು, ಸಿಬ್ಬಂದಿ ವಜಾ
ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತುಗೊಳಿಸಲಾಗಿದೆ. ಅಥಿತಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪ ಹಿನ್ನೆಲೆ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅದೇಶ ಹೊರಡಿಸಿದ್ದಾರೆ.
ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಸಮುದ್ರಪಾಲಾದ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಡಲ ತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ಪೊಲೀಸರ ಸೂಚನೆ ನೀಡಿದ್ದಾರೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…