ಕಾರವಾರ: ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.
ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಶಾಲೆಯ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. 7 ವಿದ್ಯಾರ್ಥಿನಿಯರ ಪೈಕಿ 4 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…